<p><strong>ಶಹಜಾನ್ಪುರ್:</strong> ನ್ಯಾಯಾಲಯದ ಆವರಣದಲ್ಲೇ ವಕೀಲರೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಶಹಜಾನ್ಪುರ್ನಲ್ಲಿ ನಡೆದಿರುವುದು ವರದಿಯಾಗಿದೆ.</p>.<p>ಸೋಮವಾರ ಇಲ್ಲಿನ ಸಿವಿಲ್ ಕೋರ್ಟ್ನ ಮೂರನೇ ಮಹಡಿಯಲ್ಲಿ ವಕೀಲ ಭೂಪೆಂದ್ರ ಪ್ರತಾಪ್ ಸಿಂಗ್ ಎನ್ನುವರನ್ನು ದುಷ್ಕರ್ಮಿಗಳು ನಾಡ ಪಿಸ್ತೂಲ್ನಿಂದ ಗುಂಡಿಟ್ಟು ಕೊಲೆ ಮಾಡಿದ್ದಾರೆ.</p>.<p>ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಹಂತಕರ ಪತ್ತೆಗೆ ಬಲೆ ಬೀಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ದ್ವೇಷ ಸಾಧನೆಗೆ ಈಕೊಲೆ ನಡೆದಿದೆ ಎಂಬ ಅನುಮಾನವನ್ನುಪೊಲೀಸರು ವ್ಯಕ್ತಪಡಿಸಿದ್ದಾರೆ.</p>.<p>ಘಟನೆ ನಡೆದ ಸ್ಥಳದಿಂದ ನಾಡ ಪಿಸ್ತೂಲ್ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ದೆಹಲಿಯ ರೋಹಿಣಿಯ ನ್ಯಾಯಾಲಯದಲ್ಲಿಯೇ ದುಷ್ಕರ್ಮಿಗಳು ಗ್ಯಾಂಗ್ಸ್ಟರ್ ಜಿತೇಂದ್ರ ಗೋಗಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದರು. ಕೋರ್ಟ್ ಹಾಲ್ನಲ್ಲೇಇಂತಹ ಘಟನೆಗಳು ನಡೆದಿದ್ದಕ್ಕೆ ದೆಹಲಿ ಹೈಕೋರ್ಟ್ ತೀವ್ರ ಆಘಾತ ವ್ಯಕ್ತಪಡಿಸಿತ್ತು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/terrorism-will-avenge-every-drop-of-innocent-blood-in-jammu-and-kashmir-lg-manoj-sinha-876413.html" target="_blank">ಕಾಶ್ಮೀರದಲ್ಲಿ ಸುರಿದ ಅಮಾಯಕರ ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ: ಮನೋಜ್ ಸಿನ್ಹಾ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಜಾನ್ಪುರ್:</strong> ನ್ಯಾಯಾಲಯದ ಆವರಣದಲ್ಲೇ ವಕೀಲರೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಶಹಜಾನ್ಪುರ್ನಲ್ಲಿ ನಡೆದಿರುವುದು ವರದಿಯಾಗಿದೆ.</p>.<p>ಸೋಮವಾರ ಇಲ್ಲಿನ ಸಿವಿಲ್ ಕೋರ್ಟ್ನ ಮೂರನೇ ಮಹಡಿಯಲ್ಲಿ ವಕೀಲ ಭೂಪೆಂದ್ರ ಪ್ರತಾಪ್ ಸಿಂಗ್ ಎನ್ನುವರನ್ನು ದುಷ್ಕರ್ಮಿಗಳು ನಾಡ ಪಿಸ್ತೂಲ್ನಿಂದ ಗುಂಡಿಟ್ಟು ಕೊಲೆ ಮಾಡಿದ್ದಾರೆ.</p>.<p>ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಹಂತಕರ ಪತ್ತೆಗೆ ಬಲೆ ಬೀಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ದ್ವೇಷ ಸಾಧನೆಗೆ ಈಕೊಲೆ ನಡೆದಿದೆ ಎಂಬ ಅನುಮಾನವನ್ನುಪೊಲೀಸರು ವ್ಯಕ್ತಪಡಿಸಿದ್ದಾರೆ.</p>.<p>ಘಟನೆ ನಡೆದ ಸ್ಥಳದಿಂದ ನಾಡ ಪಿಸ್ತೂಲ್ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ದೆಹಲಿಯ ರೋಹಿಣಿಯ ನ್ಯಾಯಾಲಯದಲ್ಲಿಯೇ ದುಷ್ಕರ್ಮಿಗಳು ಗ್ಯಾಂಗ್ಸ್ಟರ್ ಜಿತೇಂದ್ರ ಗೋಗಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದರು. ಕೋರ್ಟ್ ಹಾಲ್ನಲ್ಲೇಇಂತಹ ಘಟನೆಗಳು ನಡೆದಿದ್ದಕ್ಕೆ ದೆಹಲಿ ಹೈಕೋರ್ಟ್ ತೀವ್ರ ಆಘಾತ ವ್ಯಕ್ತಪಡಿಸಿತ್ತು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/terrorism-will-avenge-every-drop-of-innocent-blood-in-jammu-and-kashmir-lg-manoj-sinha-876413.html" target="_blank">ಕಾಶ್ಮೀರದಲ್ಲಿ ಸುರಿದ ಅಮಾಯಕರ ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ: ಮನೋಜ್ ಸಿನ್ಹಾ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>