ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು. ಬೆಳೆಗಳಿಗೆ ನೀಡುತ್ತಿರುವ ಬೆಂಬಲ ಬೆಲೆಯನ್ನು ಕಾನೂನಿನ ಚೌಕಟ್ಟಿ ನೊಳಗೆ ತರುವಂತೆ ಒತ್ತಾಯಿಸಿ ಸಾವಿರಾರು ರೈತರು ಹತ್ತು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದಾರೆ.ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ರೈತರನ್ನು ಮಾತುಕತೆ ಕರೆಯದೇ ನಿರ್ಲಕ್ಷ್ಯಿಸಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.