<p><strong>ನವದೆಹಲಿ</strong>: ‘ಸಾವಿರಾರು ಹೂವುಗಳು ಅರಳಲಿ. ಯಾವುದೇ ಮೂಲಗಳಿಂದ ಚಿಂತನೆಗಳು ಮೂಡಿಬರಲಿ’ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.</p>.<p>ಕೋವಿಡ್–19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ(ಪಿಐಎಲ್) ಸಂಬಂಧಿಸಿದಂತೆ ನ್ಯಾಯಾಲಯ ಈ ಪ್ರತಿಕ್ರಿಯೆ ನೀಡಿದೆ.</p>.<p>ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ವಿಕ್ರಂ ನಾಥ್ ಮತ್ತು ಬಿ.ವಿ. ನಾಗರತ್ನ ಅವರನ್ನೊಳಗೊಂಡ ಪೀಠವು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ.</p>.<p>ಕೋವಿಡ್–19 ಲಸಿಕೆಯನ್ನು ಉಚಿತವಾಗಿ ಇಡೀ ದೇಶದಾದ್ಯಂತ ಏಕರೂಪ ಮಾದರಿಯಲ್ಲಿ ನೀಡಬೇಕು ಹಾಗೂ ವೈರಸ್ ಹಬ್ಬದಂತೆ ಕ್ರಮಕೈಗೊಳ್ಳಲು ಸಲಹೆ ನೀಡಲು ಸಾಂಕ್ರಾಮಿಕ ಮತ್ತು ವೈರಾಣು ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಎಸ್ಡಿಪಿಐ ಪಿಐಎಲ್ ಸಲ್ಲಿಸಿತ್ತು. ಪೀಠವು ಈ ಪಿಐಎಲ್ ಅನ್ನು ತಿರಸ್ಕರಿಸಿತು.</p>.<p>‘ಕೋವಿಡ್ ಸಿದ್ಧತೆ ಬಗ್ಗೆ ಈಗಾಗಲೇ ನಾವು ಆದೇಶಗಳನ್ನು ನೀಡಿದ್ದೇವೆ. ಈ ವಿಷಯದಲ್ಲಿ ನೀವು ಮಧ್ಯಪ್ರವೇಶಿಸಬಹುದು ಮತ್ತು ಸಲಹೆಗಳನ್ನು ನೀಡಬಹುದು’ ಎಂದು ಪೀಠವು ಹೇಳಿದೆ.</p>.<p>‘ಸಾವಿರಾರು ಹೂವುಗಳು ಅರಳಲಿ. ಯಾವುದೇ ಮೂಲಗಳಿಂದ ಚಿಂತನೆಗಳು ಮೂಡಿಬರಲಿ ಎಂದು ಜಗತ್ತಿನ ರಾಜಕೀಯ ಇತಿಹಾಸದಲ್ಲಿ ಹೇಳಿರಬಹುದು. ಆದರೂ, ಈ ವಿಷಯದಲ್ಲೂ ಉಲ್ಲೇಖಿಸಬಹುದು’ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಸಾವಿರಾರು ಹೂವುಗಳು ಅರಳಲಿ. ಯಾವುದೇ ಮೂಲಗಳಿಂದ ಚಿಂತನೆಗಳು ಮೂಡಿಬರಲಿ’ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.</p>.<p>ಕೋವಿಡ್–19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ(ಪಿಐಎಲ್) ಸಂಬಂಧಿಸಿದಂತೆ ನ್ಯಾಯಾಲಯ ಈ ಪ್ರತಿಕ್ರಿಯೆ ನೀಡಿದೆ.</p>.<p>ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ವಿಕ್ರಂ ನಾಥ್ ಮತ್ತು ಬಿ.ವಿ. ನಾಗರತ್ನ ಅವರನ್ನೊಳಗೊಂಡ ಪೀಠವು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ.</p>.<p>ಕೋವಿಡ್–19 ಲಸಿಕೆಯನ್ನು ಉಚಿತವಾಗಿ ಇಡೀ ದೇಶದಾದ್ಯಂತ ಏಕರೂಪ ಮಾದರಿಯಲ್ಲಿ ನೀಡಬೇಕು ಹಾಗೂ ವೈರಸ್ ಹಬ್ಬದಂತೆ ಕ್ರಮಕೈಗೊಳ್ಳಲು ಸಲಹೆ ನೀಡಲು ಸಾಂಕ್ರಾಮಿಕ ಮತ್ತು ವೈರಾಣು ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಎಸ್ಡಿಪಿಐ ಪಿಐಎಲ್ ಸಲ್ಲಿಸಿತ್ತು. ಪೀಠವು ಈ ಪಿಐಎಲ್ ಅನ್ನು ತಿರಸ್ಕರಿಸಿತು.</p>.<p>‘ಕೋವಿಡ್ ಸಿದ್ಧತೆ ಬಗ್ಗೆ ಈಗಾಗಲೇ ನಾವು ಆದೇಶಗಳನ್ನು ನೀಡಿದ್ದೇವೆ. ಈ ವಿಷಯದಲ್ಲಿ ನೀವು ಮಧ್ಯಪ್ರವೇಶಿಸಬಹುದು ಮತ್ತು ಸಲಹೆಗಳನ್ನು ನೀಡಬಹುದು’ ಎಂದು ಪೀಠವು ಹೇಳಿದೆ.</p>.<p>‘ಸಾವಿರಾರು ಹೂವುಗಳು ಅರಳಲಿ. ಯಾವುದೇ ಮೂಲಗಳಿಂದ ಚಿಂತನೆಗಳು ಮೂಡಿಬರಲಿ ಎಂದು ಜಗತ್ತಿನ ರಾಜಕೀಯ ಇತಿಹಾಸದಲ್ಲಿ ಹೇಳಿರಬಹುದು. ಆದರೂ, ಈ ವಿಷಯದಲ್ಲೂ ಉಲ್ಲೇಖಿಸಬಹುದು’ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>