<p class="title"><strong>ಕೊಕ್ರಜಾರ್ (ಅಸ್ಸಾಂ):</strong> ‘ರಾಜ್ಯದಲ್ಲಿ ಪಡಿತರ ಚೀಟಿಗಳೊಂದಿಗೆ ಆಧಾರ್ ಕಾರ್ಡ್ಗಳನ್ನು ಜೋಡಣೆ ಮಾಡಿದ ಬಳಿಕ ಫಲಾನುಭವಿಗಳ ಸಂಖ್ಯೆಯಲ್ಲಿ ಸುಮಾರು 50 ಲಕ್ಷದಷ್ಟು ಅಂತರ ಕಂಡುಬಂದಿದೆ’ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ತಿಳಿಸಿದ್ದಾರೆ.</p>.<p class="title">ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಡಿತರ ಚೀಟಿಗೆ ನಿಜವಾಗಿಯೂ ಅರ್ಹರಾದ ಫಲಾನುಭವಿಗಳನ್ನು ಪಟ್ಟಿಗೆ ಸೇರಿಸಲು ಸರ್ಕಾರವು ಆಧಾರ್ ಜೋಡಣೆಯನ್ನು ಕೈಗೊಂಡಿದೆ. ಜೋಡಣೆ ಬಳಿಕಸುಮಾರು 50 ಲಕ್ಷದಷ್ಟು ಫಲಾನುಭವಿಗಳು ಈ ಸೇವೆಯ ವ್ಯಾಪ್ತಿಯೊಳಗೆ ಬಂದಿಲ್ಲ. ಈ ಫಲಾನುಭವಿಗಳಲ್ಲಿ ಕೆಲವರು ಸಾವಿಗೀಡಾಗಿರಬಹುದು, ಮತ್ತೆ ಕೆಲವರು ಮದುವೆಯಾಗಿ ಬೇರೆಡೆ ಸ್ಥಳಾಂತರಗೊಂಡಿರಬಹುದು.ದುರದೃಷ್ಟವಶಾತ್ ಕೆಲವು ನಕಲಿ ಫಲಾನುಭವಿಗಳೂ ಇದ್ದಾರೆ’ ಎಂದು ಅವರು ವಿವರಿಸಿದ್ದಾರೆ.</p>.<p>‘ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ ಹೊಸದಾಗಿ50 ಲಕ್ಷ ಜನರನ್ನು ಸೇರ್ಪಡೆಗೊಳಿಸಲಿದ್ದೇವೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಎಲ್ಲಾ ಅಂಶಗಳನ್ನು ಚರ್ಚಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>ರಾಜ್ಯ ಸರ್ಕಾರದ ‘ಅರುಣೋದಯ್’ ಯೋಜನೆಯಲ್ಲಿ ಸುಮಾರು 62 ಸಾವಿರ ಮಂದಿ ಅನರ್ಹರು ಇದ್ದಾರೆ ಎಂಬುದು ತಿಳಿದು ಬಂದಿದೆ. ಅಂತೆಯೇ ಸುಮಾರು 2 ಸಾವಿರ ಮಂದಿ ಸ್ವಇಚ್ಛೆಯಿಂದ ಈ ಯೋಜನೆಯಿಂದ ಹೊರಗುಳಿದಿದ್ದಾರೆ. ಪ್ರಸ್ತುತ 20 ಸಾವಿರ ಲಕ್ಷ ಕುಟುಂಬಗಳನ್ನು ಒಳಗೊಂಡಿರುವ ಈ ಯೋಜನೆಯಡಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಪ್ರತಿ ತಿಂಗಳೂ ₹1,250 ಮೊತ್ತವನ್ನು ಸಹಾಯದ ರೂಪದಲ್ಲಿ ನೀಡುತ್ತಿದೆ’ ಎಂದು ಅವರು ತಿಳಿಸಿದ್ದಾರೆ.</p>.<p><strong>ಉಗ್ರರ ಗುಂಪುಗಳೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ?</strong><br />‘ಕೇಂದ್ರ ಸರ್ಕಾರವು ಸೆಪ್ಟೆಂಬರ್ ಅಂತ್ಯದೊಳಗೆ ಅಸ್ಸಾಂನ ಆದಿವಾಸಿ ಉಗ್ರ ಸಂಘಟನೆಗಳೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ’ ಎಂದು ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.</p>.<p>ಈ ಕುರಿತು ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳದ ಅವರು, ‘ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಈ ಪ್ರಕ್ರಿಯೆಯನ್ನು ನಡೆಸಲಾಗುವುದು’ ಎಂದಷ್ಟೇ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೊಕ್ರಜಾರ್ (ಅಸ್ಸಾಂ):</strong> ‘ರಾಜ್ಯದಲ್ಲಿ ಪಡಿತರ ಚೀಟಿಗಳೊಂದಿಗೆ ಆಧಾರ್ ಕಾರ್ಡ್ಗಳನ್ನು ಜೋಡಣೆ ಮಾಡಿದ ಬಳಿಕ ಫಲಾನುಭವಿಗಳ ಸಂಖ್ಯೆಯಲ್ಲಿ ಸುಮಾರು 50 ಲಕ್ಷದಷ್ಟು ಅಂತರ ಕಂಡುಬಂದಿದೆ’ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ತಿಳಿಸಿದ್ದಾರೆ.</p>.<p class="title">ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಡಿತರ ಚೀಟಿಗೆ ನಿಜವಾಗಿಯೂ ಅರ್ಹರಾದ ಫಲಾನುಭವಿಗಳನ್ನು ಪಟ್ಟಿಗೆ ಸೇರಿಸಲು ಸರ್ಕಾರವು ಆಧಾರ್ ಜೋಡಣೆಯನ್ನು ಕೈಗೊಂಡಿದೆ. ಜೋಡಣೆ ಬಳಿಕಸುಮಾರು 50 ಲಕ್ಷದಷ್ಟು ಫಲಾನುಭವಿಗಳು ಈ ಸೇವೆಯ ವ್ಯಾಪ್ತಿಯೊಳಗೆ ಬಂದಿಲ್ಲ. ಈ ಫಲಾನುಭವಿಗಳಲ್ಲಿ ಕೆಲವರು ಸಾವಿಗೀಡಾಗಿರಬಹುದು, ಮತ್ತೆ ಕೆಲವರು ಮದುವೆಯಾಗಿ ಬೇರೆಡೆ ಸ್ಥಳಾಂತರಗೊಂಡಿರಬಹುದು.ದುರದೃಷ್ಟವಶಾತ್ ಕೆಲವು ನಕಲಿ ಫಲಾನುಭವಿಗಳೂ ಇದ್ದಾರೆ’ ಎಂದು ಅವರು ವಿವರಿಸಿದ್ದಾರೆ.</p>.<p>‘ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ ಹೊಸದಾಗಿ50 ಲಕ್ಷ ಜನರನ್ನು ಸೇರ್ಪಡೆಗೊಳಿಸಲಿದ್ದೇವೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಎಲ್ಲಾ ಅಂಶಗಳನ್ನು ಚರ್ಚಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>ರಾಜ್ಯ ಸರ್ಕಾರದ ‘ಅರುಣೋದಯ್’ ಯೋಜನೆಯಲ್ಲಿ ಸುಮಾರು 62 ಸಾವಿರ ಮಂದಿ ಅನರ್ಹರು ಇದ್ದಾರೆ ಎಂಬುದು ತಿಳಿದು ಬಂದಿದೆ. ಅಂತೆಯೇ ಸುಮಾರು 2 ಸಾವಿರ ಮಂದಿ ಸ್ವಇಚ್ಛೆಯಿಂದ ಈ ಯೋಜನೆಯಿಂದ ಹೊರಗುಳಿದಿದ್ದಾರೆ. ಪ್ರಸ್ತುತ 20 ಸಾವಿರ ಲಕ್ಷ ಕುಟುಂಬಗಳನ್ನು ಒಳಗೊಂಡಿರುವ ಈ ಯೋಜನೆಯಡಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಪ್ರತಿ ತಿಂಗಳೂ ₹1,250 ಮೊತ್ತವನ್ನು ಸಹಾಯದ ರೂಪದಲ್ಲಿ ನೀಡುತ್ತಿದೆ’ ಎಂದು ಅವರು ತಿಳಿಸಿದ್ದಾರೆ.</p>.<p><strong>ಉಗ್ರರ ಗುಂಪುಗಳೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ?</strong><br />‘ಕೇಂದ್ರ ಸರ್ಕಾರವು ಸೆಪ್ಟೆಂಬರ್ ಅಂತ್ಯದೊಳಗೆ ಅಸ್ಸಾಂನ ಆದಿವಾಸಿ ಉಗ್ರ ಸಂಘಟನೆಗಳೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ’ ಎಂದು ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.</p>.<p>ಈ ಕುರಿತು ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳದ ಅವರು, ‘ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಈ ಪ್ರಕ್ರಿಯೆಯನ್ನು ನಡೆಸಲಾಗುವುದು’ ಎಂದಷ್ಟೇ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>