ಆಪಾದಿತ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಹಣ ವಸೂಲಿ ಮಾಡುತ್ತಿದ್ದು, ರಾಜ್ ಅವರನ್ನು ಬ್ಲ್ಯಾಕ್ ಮೇಲ್ ಮಾಡಲಾಗುತ್ತಿದೆ. ಈ ಸಂಬಂಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ಮಹಿಳೆ ಮತ್ತು ಆಕೆಯ ಸಹಚರರಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ..
ರಾಜ್ ಅವರು ಬಿಹಾರದ ಸಮಸ್ತಿಪುರದ ಸಂಸತ್ ಸದಸ್ಯರಾಗಿದ್ದಾರೆ.
ಈ ವರ್ಷದ ಮೇ ತಿಂಗಳಿನಲ್ಲಿ ಮಹಿಳೆ ಇಲ್ಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ದೆಹಲಿ ನ್ಯಾಯಾಲಯದ ಆದೇಶದ ಮೇರೆಗೆ ದೆಹಲಿ ಪೊಲೀಸರು ಪ್ರಿನ್ಸ್ ರಾಜ್ ವಿರುದ್ಧ ಸೆಪ್ಟೆಂಬರ್ 9 ರಂದು ಎಫ್ಐಆರ್ ದಾಖಲಿಸಿದ್ದರು.
ತಾನು ಎಲ್ಜೆಪಿ ಕಾರ್ಯಕರ್ತೆ ಎಂದು ಹೇಳಿಕೊಂಡಿರುವ ಮಹಿಳೆ, ತಾನು ಪ್ರಜ್ಞಾಹೀನಳಾಗಿದ್ದಾಗ ರಾಜ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.