<p><strong>ನವದೆಹಲಿ/ಮುಂಬೈ/ಚೆನ್ನೈ: </strong>ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ಅನ್ನು ಸೋಮವಾರದಿಂದ ಅನ್ವಯವಾಗುವಂತೆ ಹಂತ ಹಂತವಾಗಿ ತೆರವುಗೊಳಿಸಲು ಮಹಾರಾಷ್ಟ್ರ ಮತ್ತು ದೆಹಲಿ ಸರ್ಕಾರಗಳು ನಿರ್ಧರಿಸಿವೆ.</p>.<p>ಹಲವು ವಿನಾಯಿತಿಗಳೊಂದಿಗೆ ತಮಿಳುನಾಡು ಸರ್ಕಾರ ಜೂನ್ 14ರ ವರೆಗೆ ಲಾಕ್ಡೌನ್ ವಿಸ್ತರಣೆ ಮಾಡಿದೆ. ಮಹಾರಾಷ್ಟ್ರದ ವಿಪತ್ತು ನಿರ್ವಹಣಾ ಘಟಕವು ಕೋವಿಡ್ ದೃಢ ಪ್ರಮಾಣ ಹಾಗೂ ಆಮ್ಲಜನಕ ಸೌಲಭ್ಯ ಹೊಂದಿದ ಹಾಸಿಗೆಗಳು ಭರ್ತಿಯಾಗಿರುವ ಆಧಾರದಲ್ಲಿ ರಾಜ್ಯವನ್ನು ಐದು ಹಂತಗಳನ್ನಾಗಿ ವಿಂಗಡಿಸಿದೆ.</p>.<p>ಇದರ ಆಧಾರದಲ್ಲಿ ಲಾಕ್ಡೌನ್ನ ನಿರ್ಬಂಧಗಳನ್ನು ಸಡಿಲಿಸಲಾಗುತ್ತದೆ. ಮುಂಬೈ ನಗರವು 3ನೇ ಹಂತದ ವ್ಯಾಪ್ತಿಯಲ್ಲಿ ಬರಲಿದ್ದು ಇಲ್ಲಿ ನಿರ್ಬಂಧಗಳನ್ನು ಭಾಗಶಃ ತೆರವುಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.</p>.<p>ದೆಹಲಿಯಲ್ಲಿ ಶೇ 50ರಷ್ಟು ಪ್ರಯಾಣಿಕರೊಂದಿಗೆ ಮೆಟ್ರೊ ರೈಲು ಸಂಚಾರ ಮಾಡಲಿವೆ. ಸರಿ–ಬೆಸ ಸಂಖ್ಯೆಯ ಆಧಾರದಲ್ಲಿ ಬೆಳಿಗ್ಗೆ 10ರಿಂದ ರಾತ್ರಿ 8ರ ವರೆಗೆ ಮಾರುಕಟ್ಟೆಗಳು ಮತ್ತು ಮಾಲ್ಗಳು ತೆರೆಯಲು ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದರು.</p>.<p>ಶೇ 50ರಷ್ಟು ಹಾಜರಾತಿಯೊಂದಿಗೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳನ್ನು ತೆರಯಲು ಅವಕಾಶ ನೀಡಲಾಗುವುದು ಎಂದೂ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ಮುಂಬೈ/ಚೆನ್ನೈ: </strong>ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ಅನ್ನು ಸೋಮವಾರದಿಂದ ಅನ್ವಯವಾಗುವಂತೆ ಹಂತ ಹಂತವಾಗಿ ತೆರವುಗೊಳಿಸಲು ಮಹಾರಾಷ್ಟ್ರ ಮತ್ತು ದೆಹಲಿ ಸರ್ಕಾರಗಳು ನಿರ್ಧರಿಸಿವೆ.</p>.<p>ಹಲವು ವಿನಾಯಿತಿಗಳೊಂದಿಗೆ ತಮಿಳುನಾಡು ಸರ್ಕಾರ ಜೂನ್ 14ರ ವರೆಗೆ ಲಾಕ್ಡೌನ್ ವಿಸ್ತರಣೆ ಮಾಡಿದೆ. ಮಹಾರಾಷ್ಟ್ರದ ವಿಪತ್ತು ನಿರ್ವಹಣಾ ಘಟಕವು ಕೋವಿಡ್ ದೃಢ ಪ್ರಮಾಣ ಹಾಗೂ ಆಮ್ಲಜನಕ ಸೌಲಭ್ಯ ಹೊಂದಿದ ಹಾಸಿಗೆಗಳು ಭರ್ತಿಯಾಗಿರುವ ಆಧಾರದಲ್ಲಿ ರಾಜ್ಯವನ್ನು ಐದು ಹಂತಗಳನ್ನಾಗಿ ವಿಂಗಡಿಸಿದೆ.</p>.<p>ಇದರ ಆಧಾರದಲ್ಲಿ ಲಾಕ್ಡೌನ್ನ ನಿರ್ಬಂಧಗಳನ್ನು ಸಡಿಲಿಸಲಾಗುತ್ತದೆ. ಮುಂಬೈ ನಗರವು 3ನೇ ಹಂತದ ವ್ಯಾಪ್ತಿಯಲ್ಲಿ ಬರಲಿದ್ದು ಇಲ್ಲಿ ನಿರ್ಬಂಧಗಳನ್ನು ಭಾಗಶಃ ತೆರವುಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.</p>.<p>ದೆಹಲಿಯಲ್ಲಿ ಶೇ 50ರಷ್ಟು ಪ್ರಯಾಣಿಕರೊಂದಿಗೆ ಮೆಟ್ರೊ ರೈಲು ಸಂಚಾರ ಮಾಡಲಿವೆ. ಸರಿ–ಬೆಸ ಸಂಖ್ಯೆಯ ಆಧಾರದಲ್ಲಿ ಬೆಳಿಗ್ಗೆ 10ರಿಂದ ರಾತ್ರಿ 8ರ ವರೆಗೆ ಮಾರುಕಟ್ಟೆಗಳು ಮತ್ತು ಮಾಲ್ಗಳು ತೆರೆಯಲು ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದರು.</p>.<p>ಶೇ 50ರಷ್ಟು ಹಾಜರಾತಿಯೊಂದಿಗೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳನ್ನು ತೆರಯಲು ಅವಕಾಶ ನೀಡಲಾಗುವುದು ಎಂದೂ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>