<p><strong>ನವದೆಹಲಿ: </strong>ದೆಹಲಿಯಲ್ಲಿ ಸದ್ಯ ಕೊರೊನಾ ನಿಯಂತ್ರಣದಲ್ಲಿದ್ದು, ಹಂತಹಂತವಾಗಿ ಲಾಕ್ಡೌನ್ ಸಡಿಲಿಸುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.</p>.<p>ಇದೇವೇಳೆ, ಕೊರೊನಾ ವೈರಸ್ ವಿರುದ್ಧದ ಹೋರಾಟ ಇನ್ನೂ ನಿಂತಿಲ್ಲ ಎಂದು ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.</p>.<p>"ಶುಕ್ರವಾರ ನಡೆದ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ, ಲಾಕ್ಡೌನ್ ಅನ್ನು ಹಂತ ಹಂತವಾಗಿ ತೆಗೆಯಲು ನಿರ್ಧರಿಸಲಾಯಿತು. ಈ ಪ್ರಕ್ರಿಯೆಯಲ್ಲಿ, ನಾವು ಮೊದಲು ಅತ್ಯಂತ ಕೆಳ ಹಂತದ ಕಾರ್ಮಿಕರ ಬಗ್ಗೆ ಯೋಚಿಸಬೇಕಿದೆ. ದಿನಗೂಲಿ ಕೆಲಸಗಾರರು, ಕಾರ್ಮಿಕರು, ವಲಸೆ ಕಾರ್ಮಿಕರ ಬಗ್ಗೆ ಗಮನಹರಿಸಬೇಕು’ಎಂದು ಅವರು ಹೇಳಿದರು. .</p>.<p>ಕಾರ್ಖಾನೆಗಳನ್ನು ತೆರೆಯಲು ಮತ್ತು ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಕೇಜ್ರಿವಾಲ್ ಹೇಳಿದರು.</p>.<p>ಪ್ರತಿ ವಾರ ತಜ್ಞರ ಮತ್ತು ಸಾರ್ವಜನಿಕ ಅಭಿಪ್ರಾಯವನ್ನು ಆಧರಿಸಿ ಅನ್ಲಾಕ್ ಪ್ರಕ್ರಿಯೆಯನ್ನು ಸರ್ಕಾರ ಮುಂದುವರಿಸಲಿದೆ ಎಂದು ಅವರು ಹೇಳಿದರು.</p>.<p>‘ಹಲವಾರು ಸಮಸ್ಯೆಗಳನ್ನು ಎದುರಿಸಿದ ಬಳಿಕ, ನಾವು ಹೇಗೋ ಕೊರೊನಾ ಎರಡನೇ ಅಲೆಯ ಮೇಲೆ ಹಿಡಿತ ಸಾಧಿಸಿದ್ದೇವೆ. ಇದರರ್ಥ ಹೋರಾಟವು ಕೊನೆಗೊಂಡಿದೆ ಎಂದಲ್ಲ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ. ಕಳೆದ 24 ಗಂಟೆಗಳಲ್ಲಿ, ಪಾಸಿಟಿವಿಟಿ ದರ ಶೇ. 1.5 ರಷ್ಟಿದೆ.’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೆಹಲಿಯಲ್ಲಿ ಸದ್ಯ ಕೊರೊನಾ ನಿಯಂತ್ರಣದಲ್ಲಿದ್ದು, ಹಂತಹಂತವಾಗಿ ಲಾಕ್ಡೌನ್ ಸಡಿಲಿಸುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.</p>.<p>ಇದೇವೇಳೆ, ಕೊರೊನಾ ವೈರಸ್ ವಿರುದ್ಧದ ಹೋರಾಟ ಇನ್ನೂ ನಿಂತಿಲ್ಲ ಎಂದು ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.</p>.<p>"ಶುಕ್ರವಾರ ನಡೆದ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ, ಲಾಕ್ಡೌನ್ ಅನ್ನು ಹಂತ ಹಂತವಾಗಿ ತೆಗೆಯಲು ನಿರ್ಧರಿಸಲಾಯಿತು. ಈ ಪ್ರಕ್ರಿಯೆಯಲ್ಲಿ, ನಾವು ಮೊದಲು ಅತ್ಯಂತ ಕೆಳ ಹಂತದ ಕಾರ್ಮಿಕರ ಬಗ್ಗೆ ಯೋಚಿಸಬೇಕಿದೆ. ದಿನಗೂಲಿ ಕೆಲಸಗಾರರು, ಕಾರ್ಮಿಕರು, ವಲಸೆ ಕಾರ್ಮಿಕರ ಬಗ್ಗೆ ಗಮನಹರಿಸಬೇಕು’ಎಂದು ಅವರು ಹೇಳಿದರು. .</p>.<p>ಕಾರ್ಖಾನೆಗಳನ್ನು ತೆರೆಯಲು ಮತ್ತು ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಕೇಜ್ರಿವಾಲ್ ಹೇಳಿದರು.</p>.<p>ಪ್ರತಿ ವಾರ ತಜ್ಞರ ಮತ್ತು ಸಾರ್ವಜನಿಕ ಅಭಿಪ್ರಾಯವನ್ನು ಆಧರಿಸಿ ಅನ್ಲಾಕ್ ಪ್ರಕ್ರಿಯೆಯನ್ನು ಸರ್ಕಾರ ಮುಂದುವರಿಸಲಿದೆ ಎಂದು ಅವರು ಹೇಳಿದರು.</p>.<p>‘ಹಲವಾರು ಸಮಸ್ಯೆಗಳನ್ನು ಎದುರಿಸಿದ ಬಳಿಕ, ನಾವು ಹೇಗೋ ಕೊರೊನಾ ಎರಡನೇ ಅಲೆಯ ಮೇಲೆ ಹಿಡಿತ ಸಾಧಿಸಿದ್ದೇವೆ. ಇದರರ್ಥ ಹೋರಾಟವು ಕೊನೆಗೊಂಡಿದೆ ಎಂದಲ್ಲ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ. ಕಳೆದ 24 ಗಂಟೆಗಳಲ್ಲಿ, ಪಾಸಿಟಿವಿಟಿ ದರ ಶೇ. 1.5 ರಷ್ಟಿದೆ.’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>