ಈ ಕುರಿತು ರಾಜ್ಯಪಾಲರಿಗೆ ಪತ್ರ ಬರೆದಿರುವ ಅವರು, ನಲಂದಾ ಜಿಲ್ಲೆಯಲ್ಲಿ ಇತ್ತೀಚೆಗೆ ವಿಷಯುಕ್ತ ಮದ್ಯ ಸೇವನೆಯಿಂದ 11 ಮಂದಿ ಮೃತಪಟ್ಟಿರುವ ವಿಚಾರವನ್ನು ಉಲ್ಲೇಖಿಸಿದ್ದಾರೆ. ಪೊಲೀಸ್ ಸೇರಿದಂತೆ ರಾಜ್ಯದ ಸಂಸ್ಥೆಗಳೇ ಇದಕ್ಕೆ ಹೊಣೆ. ಮುಖ್ಯಮಂತ್ರಿಗಳು ಸಹ ಕರ್ತವ್ಯದಲ್ಲಿ ವಿಫಲರಾಗಿದ್ದಾರೆ. ರಾಜ್ಯದಲ್ಲಿ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿಯೂ ಅವರು ವಿಫಲರಾಗಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.