ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ: ಪೆಗಾಸಸ್ ವಿರುದ್ಧ ಪ್ರತಿಭಟನೆ, ಕಲಾಪ ಮುಂದೂಡಿಕೆ

ಸಾಮಾನ್ಯ ವಿಮಾ ರಾಷ್ಟ್ರೀಕರಣ ತಿದ್ದುಪಡಿ ಮಸೂದೆ ಅಂಗೀಕಾರ
Last Updated 2 ಆಗಸ್ಟ್ 2021, 13:15 IST
ಅಕ್ಷರ ಗಾತ್ರ

ನವದೆಹಲಿ: ಪೆಗಾಸಸ್ ಗೂಢಚರ್ಯೆ ವಿವಾದ ಹಾಗೂ ಇತರ ವಿಷಯ ಕುರಿತು ವಿರೋಧಪಕ್ಷದ ಸದಸ್ಯರು ಸೋಮವಾರ ಲೋಕಸಭೆಯಲ್ಲಿ ಪ್ರತಿಭಟನೆ ಮುಂದುವರಿಸಿದ್ದರಿಂದ ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಯಿತು.

ಸ್ಪೀಕರ್ ಸ್ಥಾನದಲ್ಲಿದ್ದ ರಮಾದೇವಿ ಅವರು ಕಲಾಪವನ್ನು ಮುಂದೂಡುವ ಮುನ್ನ, ಸಾಮಾನ್ಯ ವಿಮಾ ವ್ಯವಹಾರ (ರಾಷ್ಟ್ರೀಕರಣ) ತಿದ್ದುಪಡಿ ಮಸೂದೆಯನ್ನು ಸದನವು ಧ್ವನಿಮತದ ಮೂಲಕ ಅಂಗೀಕರಿಸಿತು.

ಮಧ್ಯಾಹ್ನ 3.30ರ ವೇಳೆಗೆ ಸದನ ಮತ್ತೆ ಸಭೆ ಸೇರಿದಾಗ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಚರ್ಚೆಗೊಡ್ಡಿದ ವಿಷಯದ ಕುರಿತು ಪ್ರತಿಕ್ರಿಯಿಸಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಂದಾದರು. ಆದರೆ, ಅದೇ ವೇಳೆ ವಿರೋಧಪಕ್ಷದ ಸದಸ್ಯರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದರು.

ಗದ್ದಲ ಮುಂದುವರಿದಂತೆ, ಮಸೂದೆಯನ್ನು ಅಂಗೀಕರಿಸಲು ಸಚಿವರು ಪ್ರಯತ್ನಿಸಿದರು. ಕೊನೆಗೆ ಸಾಮಾನ್ಯ ವಿಮಾ ವ್ಯವಹಾರ (ರಾಷ್ಟ್ರೀಕರಣ) ತಿದ್ದುಪಡಿ ಮಸೂದೆಯನ್ನು ಧ್ವನಿಮತದ ಮೂಲಕ ಸದನವು ಅನುಮೋದಿಸಿತು. ನಂತರ ಕಲಾಪ ಮುಂದೂಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT