ಮುಂಬರುವ ಲೋಕಸಭಾ ಚುನಾವಣೆಗೆ ಮುಂದಿನ ವರ್ಷವೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು, ನಿಧಿ ಸಂಗ್ರಹಕ್ಕೆ ವಿಶೇಷ ವ್ಯವಸ್ಥೆ, ಚುನಾವಣೆ ಮತ್ತು ಮೈತ್ರಿಗೆ ಸಮನ್ವಯ ಸಮಿತಿ ರಚನೆ ಸೇರಿದಂತೆ ಹಲವು ಶಿಫಾರಸುಗಳು ಕರಡಿನಲ್ಲಿವೆ. ಯುವಕರು, ಮಹಿಳೆಯರು, ದಲಿತರು, ಇತರೆ ಹಿಂದುಳಿದ ವರ್ಗದವರು (ಒಬಿಸಿ) ಮತ್ತು ಅಲ್ಪಸಂಖ್ಯಾತರಿಗೆ ಪಕ್ಷದಲ್ಲಿ ಸಾಕಷ್ಟು ಪ್ರಾತಿನಿಧ್ಯ ನೀಡುವ ಸಾಧ್ಯತೆ ಇದೆ.