ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಸಿಆರ್‌ಎ: ತಿದ್ದುಪಡಿ ಮಸೂದೆ ಅಂಗೀಕಾರ

Last Updated 21 ಸೆಪ್ಟೆಂಬರ್ 2020, 20:43 IST
ಅಕ್ಷರ ಗಾತ್ರ

ನವದೆಹಲಿ: ‘ವಿದೇಶಿ ದೇಣಿಗೆ ಸ್ವೀಕರಿಸುವ ಸರ್ಕಾರೇತರ ಸಂಸ್ಥೆಯ ಪದಾಧಿಕಾರಿಗಳು, ನೋಂದಣಿಯ ಸಂದರ್ಭದಲ್ಲಿ ತಮ್ಮ ಆಧಾರ್‌ ಸಂಖ್ಯೆ ನೀಡುವುದನ್ನು ಕಡ್ಡಾಯಗೊಳಿಸುವ ವಿದೇಶಿ ದೇಣಿಗೆ (ತಿದ್ದುಪಡಿ) ಮಸೂದೆಯನ್ನು ಲೋಕಸಭೆಯಲ್ಲಿ ಸೋಮವಾರ ಅಂಗೀಕರಿಸಲಾಯಿತು.

ವಿರೋಧಪಕ್ಷಗಳ ಕೆಲವು ಸದಸ್ಯರು ವ್ಯಕ್ತಪಡಿಸಿದ ಕಳವಳಕ್ಕೆ ಸ್ಪಷ್ಟನೆ ನೀಡಿದ ಗೃಹಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್‌, ‘ಇದು ಯಾವುದೇ ಧರ್ಮ ಅಥವಾ ಎನ್‌ಜಿಒ ವಿರುದ್ಧದ ಮಸೂದೆಯಲ್ಲ. ವಿದೇಶಿ ದೇಣಿಗೆಯನ್ನು ದುರ್ಬಳಕೆ ಮಾಡುವುದನ್ನು ತಡೆಯಲು ಸಹಾಯಕವಾಗಲಿದೆ. ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಈ ಮಸೂದೆಯ ಅಗತ್ಯವಿದೆ’ ಎಂದರು.

‘ಈ ಮಸೂದೆಯ ಮೂಲಕ ಎನ್‌ಜಿಒಗಳ ಉಸಿರುಗಟ್ಟಿಸುವ ಯತ್ನ ಮಾಡಲಾಗುತ್ತಿದೆ’ ಎಂದು ಕಾಂಗ್ರೆಸ್‌ ಸಂಸದ ಆಂಟೊ ಆಂಟನಿ ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT