ನವದೆಹಲಿ (ಪಿಟಿಐ): ವನ್ಯಜೀವಿ ಸಂರಕ್ಷಣಾ ತಿದ್ದುಪಡಿ ಕಾಯ್ದೆ–2021 ಅನ್ನುಲೋಕಸಭೆಯಲ್ಲಿ ಮಂಗಳವಾರ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.
ಕಾಯ್ದೆ ಮೇಲಿನ ಚರ್ಚೆ ವೇಳೆ ಮಾತನಾಡಿದ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್, ‘ವನ್ಯಜೀವಿಗಳ ಉತ್ಪನ್ನಗಳಿಂದ ತಯಾರಿಸಲಾಗುವ ಶಾಲು ಹಾಗೂ ಸೌಂದರ್ಯವರ್ಧಕ ವಸ್ತುಗಳನ್ನು ಬಹಿಷ್ಕರಿಸುವಂತೆ ಜನರಲ್ಲಿ ಅರಿವು ಮೂಡಿಸಬೇಕು. ಆ ಮೂಲಕ ವನ್ಯ ಪ್ರಾಣಿಗಳ ರಕ್ಷಣೆಗೆ ಎಲ್ಲರೂ ಮುಂದಾಗಬೇಕು’ ಎಂದರು.