ಮರಾಕ್ ಅವರ ಬಂಧನಕ್ಕೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಇನ್ನೊಂದೆಡೆ ಮರಾಕ್ ಅವರು, ‘ಮೇಘಾಲಯದ ಮುಖ್ಯಮಂತ್ರಿ ಕಾರ್ನಾಡ್ ಕೆ. ಸಂಗಮ ಅವರು ತಮ್ಮ ಮೇಲೆ ರಾಜಕೀಯ ಸೇಡನ್ನು ತೀರಿಸಿಕೊಳ್ಳಲು ಹೀಗೆಲ್ಲಾ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ. ಆದರೆ, ಮೇಘಾಲಯದ ಉಪ ಮುಖ್ಯಮಂತ್ರಿ ಪ್ರೆಸ್ಟೋನ್ ಟೈನ್ಸಾಂಗ್ ಅವರು ಮರಾಕ್ ಅವರ ಆರೋಪವನ್ನು ಅಲ್ಲಗಳೆದಿದ್ದಾರೆ.