ನವದೆಹಲಿ: ‘ಮಹಾವೀರ ಅವರ ಜೀವನವು ನಮಗೆ ಶಾಂತಿ ಮತ್ತು ಸಂಯಮದ ಸಂದೇಶವನ್ನು ನೀಡುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹೇಳಿದರು.
ಮಹಾವೀರ ಜಯಂತಿಯ ಅಂಗವಾಗಿ ಟ್ವೀಟ್ ಮಾಡಿರುವ ಅವರು, ‘ಕೊರೊನಾ ಬಿಕ್ಕಟ್ಟನ್ನು ನಾವೆಲ್ಲರೂ ಒಗ್ಗಟ್ಟಿನಿಂದ ಎದುರಿಸೋಣ. ಮಹಾವೀರ ಅವರ ಆರ್ಶೀವಾದ ನಮ್ಮೆಲ್ಲರ ಮೇಲಿರಲಿ ಹಾಗೂ ಅವರು ಎಲ್ಲರ ಆರೋಗ್ಯವನ್ನು ಕಾಪಾಡಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಅವರು ಹೇಳಿದರು.