<p><strong>ಬೆಳಗಾವಿ:</strong> ತಾಲ್ಲೂಕಿನ ವಂಟಮೂರಿ ಘಾಟ್ನಲ್ಲಿ ಪುಣೆ–ಬೆಂಗಳೂರು ರಸ್ತೆಯಲ್ಲಿ ಕಂಟೇನರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರೂ ಚಾಲಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಂಗಳವಾರ ಬೆಳಗಿನ ಜಾವ ಒಂದು ಗಂಟೆ ಸುಮಾರಿಗೆ ನಡೆದಿದೆ.</p>.<p>ಮೃತರನ್ನು ಉತ್ತರಪ್ರದೇಶದ ನೀರಜ ಬಲ್ಲೂರ ಹಾಗೂ ಟ್ರಕ್ ಚಾಲಕ ಮಹಾರಾಷ್ಟ್ರದ ರಾಜೇಂದ್ರ ದೋಯಿಪಡೆ ಎಂದು ಗುರುತಿಸಲಾಗಿದೆ.</p>.<p>ಶಿಗ್ಗಾವಿ ಕಡೆಯಿಂದ ಮಹಾರಾಷ್ಟ್ರಕ್ಕೆ ಮೆಕ್ಕೆಜೋಳದ ಹಿಟ್ಟಿನ ಚೀಲಗಳನ್ನು ತುಂಬಿಕೊಂಡು ಹೋಗುತ್ತಿದ್ದ ಕಂಟೇನರ್ ರಾಷ್ಟ್ರೀಯ ಹೆದ್ದಾರಿ-4ರ ಸುತಗಟ್ಟಿ ಇಳಿಜಾರು ಪ್ರದೇಶದಲ್ಲಿ ವಿಭಜಕವನ್ನು ಹಾರಿ ಮಹಾರಾಷ್ಟ್ರ ಕಡೆಯಿಂದ ಬೆಳಗಾವಿಗೆ ಈರುಳ್ಳಿ ಚೀಲಗಳನ್ನು ತರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕಂಟೇನರ್ನ ಮೇಲ್ಭಾಗ ಕಿತ್ತು ಬಂದಿದೆ. ಚೀಲಗಳಲ್ಲಿದ್ದ ಈರುಳ್ಳಿ ರಸ್ತೆಯ ತುಂಬೆಲ್ಲಾ ಚೆಲ್ಲಾಡಿದ್ದವು.</p>.<p>ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಪ್ರಕರಣ ದಾಖಲಾಗಿದೆ.</p>.<p><a href="https://cms.prajavani.net/district/chikkaballapur/nandi-hills-weekend-entry-denied-due-to-concern-over-pandemic-847666.html" itemprop="url">ನಂದಿ ಬೆಟ್ಟ: ಭಾನುವಾರ ಸಾವಿರಾರು ಮಂದಿ ಭೇಟಿ ಕಾರಣ ವಾರಂತ್ಯಕ್ಕೆ ನಿಷೇಧ ಹೇರಿಕೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ತಾಲ್ಲೂಕಿನ ವಂಟಮೂರಿ ಘಾಟ್ನಲ್ಲಿ ಪುಣೆ–ಬೆಂಗಳೂರು ರಸ್ತೆಯಲ್ಲಿ ಕಂಟೇನರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರೂ ಚಾಲಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಂಗಳವಾರ ಬೆಳಗಿನ ಜಾವ ಒಂದು ಗಂಟೆ ಸುಮಾರಿಗೆ ನಡೆದಿದೆ.</p>.<p>ಮೃತರನ್ನು ಉತ್ತರಪ್ರದೇಶದ ನೀರಜ ಬಲ್ಲೂರ ಹಾಗೂ ಟ್ರಕ್ ಚಾಲಕ ಮಹಾರಾಷ್ಟ್ರದ ರಾಜೇಂದ್ರ ದೋಯಿಪಡೆ ಎಂದು ಗುರುತಿಸಲಾಗಿದೆ.</p>.<p>ಶಿಗ್ಗಾವಿ ಕಡೆಯಿಂದ ಮಹಾರಾಷ್ಟ್ರಕ್ಕೆ ಮೆಕ್ಕೆಜೋಳದ ಹಿಟ್ಟಿನ ಚೀಲಗಳನ್ನು ತುಂಬಿಕೊಂಡು ಹೋಗುತ್ತಿದ್ದ ಕಂಟೇನರ್ ರಾಷ್ಟ್ರೀಯ ಹೆದ್ದಾರಿ-4ರ ಸುತಗಟ್ಟಿ ಇಳಿಜಾರು ಪ್ರದೇಶದಲ್ಲಿ ವಿಭಜಕವನ್ನು ಹಾರಿ ಮಹಾರಾಷ್ಟ್ರ ಕಡೆಯಿಂದ ಬೆಳಗಾವಿಗೆ ಈರುಳ್ಳಿ ಚೀಲಗಳನ್ನು ತರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕಂಟೇನರ್ನ ಮೇಲ್ಭಾಗ ಕಿತ್ತು ಬಂದಿದೆ. ಚೀಲಗಳಲ್ಲಿದ್ದ ಈರುಳ್ಳಿ ರಸ್ತೆಯ ತುಂಬೆಲ್ಲಾ ಚೆಲ್ಲಾಡಿದ್ದವು.</p>.<p>ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಪ್ರಕರಣ ದಾಖಲಾಗಿದೆ.</p>.<p><a href="https://cms.prajavani.net/district/chikkaballapur/nandi-hills-weekend-entry-denied-due-to-concern-over-pandemic-847666.html" itemprop="url">ನಂದಿ ಬೆಟ್ಟ: ಭಾನುವಾರ ಸಾವಿರಾರು ಮಂದಿ ಭೇಟಿ ಕಾರಣ ವಾರಂತ್ಯಕ್ಕೆ ನಿಷೇಧ ಹೇರಿಕೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>