<p><strong>ನವದೆಹಲಿ:</strong> ‘ದ್ವೇಷ ಮತ್ತು ವಿಭಜನೆಯ ರಾಜಕಾರಣದಿಂದ ನನ್ನ ತಂದೆಯನ್ನು (ರಾಜೀವ್ ಗಾಂಧಿ) ಕಳೆದುಕೊಂಡಿದ್ದೇನೆ. ಆದರೆ, ಅದಕ್ಕಾಗಿ ನನ್ನ ಪ್ರೀತಿಯ ದೇಶವನ್ನು ಕಳೆದುಕೊಳ್ಳಲು ನಾನು ಬಯಸುವುದಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಕಾಂಗ್ರೆಸ್ ಹಮ್ಮಿಕೊಂಡಿರುವ ‘ಭಾರತ್ ಜೋಡೊ ಯಾತ್ರೆ’ಗೆ ಬುಧವಾರ ಚಾಲನೆ ನೀಡುವ ಮುನ್ನ ರಾಹುಲ್ ಗಾಂಧಿ, ತಮಿಳುನಾಡಿನ ಶ್ರೀಪೆರಂಬೂದೂರಿನಲ್ಲಿರುವ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.</p>.<p>ಈ ಕುರಿತು ವಿಡಿಯೊ ಮತ್ತು ಫೋಟೊಗಳನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಅವರು, ‘ಪ್ರೀತಿ ದ್ವೇಷವನ್ನು ಜಯಿಸುತ್ತದೆ. ಭರವಸೆ ಭಯವನ್ನು ಸೋಲಿಸುತ್ತದೆ. ಒಟ್ಟಾಗಿ ನಾವು ಜಯ ಸಾಧಿಸುತ್ತೇವೆ’ ಎಂದು ಹೇಳಿದ್ದಾರೆ.</p>.<p>3,570 ಕಿ.ಮೀ. ಸಂಚರಿಸಲಿರುವ ‘ಭಾರತ್ ಜೋಡೊ’ ಯಾತ್ರೆಯು ಆರ್ಥಿಕ ಅಸಮಾನತೆ, ಸಾಮಾಜಿಕ ಧ್ರುವೀಕರಣ, ರಾಜಕೀಯ ಕೇಂದ್ರೀಕರಣ ಸೇರಿದಂತೆ ದೇಶವನ್ನು ಬಾಧಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ ಎಂದು ಪಕ್ಷ ಹೇಳಿದೆ.</p>.<p>ರಾಹುಲ್ ಗಾಂಧಿ ಅವರಿಗೆ ಹಲವು ರಾಜ್ಯಗಳ ಕಾಂಗ್ರೆಸ್ ನಾಯಕರು ಸಾಥ್ ನೀಡಿದ್ದರು.</p>.<p><strong>ಓದಿ...</strong></p>.<p><a href="https://www.prajavani.net/india-news/yatra-can-achieve-both-bharat-jodo-and-congress-jodo-shashi-tharoor-969679.html" target="_blank">ಯಾತ್ರೆಯಿಂದ ಭಾರತ ಜೋಡೊ, ಕಾಂಗ್ರೆಸ್ ಜೋಡೊ ಸಾಧ್ಯವಾಗಲಿದೆ: ಶಶಿ ತರೂರ್</a></p>.<p><a href="https://www.prajavani.net/india-news/bharat-jodo-yatra-rahul-gandhi-congress-ashok-gehlot-969988.html" target="_blank">ಧರ್ಮಗಳ ನಡುವಿನ ದ್ವೇಷ ಅಂತರ್ಯುದ್ಧಕ್ಕೆ ಕಾರಣವಾಗಬಹುದು: ಅಶೋಕ್ ಗೆಹಲೋತ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ದ್ವೇಷ ಮತ್ತು ವಿಭಜನೆಯ ರಾಜಕಾರಣದಿಂದ ನನ್ನ ತಂದೆಯನ್ನು (ರಾಜೀವ್ ಗಾಂಧಿ) ಕಳೆದುಕೊಂಡಿದ್ದೇನೆ. ಆದರೆ, ಅದಕ್ಕಾಗಿ ನನ್ನ ಪ್ರೀತಿಯ ದೇಶವನ್ನು ಕಳೆದುಕೊಳ್ಳಲು ನಾನು ಬಯಸುವುದಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಕಾಂಗ್ರೆಸ್ ಹಮ್ಮಿಕೊಂಡಿರುವ ‘ಭಾರತ್ ಜೋಡೊ ಯಾತ್ರೆ’ಗೆ ಬುಧವಾರ ಚಾಲನೆ ನೀಡುವ ಮುನ್ನ ರಾಹುಲ್ ಗಾಂಧಿ, ತಮಿಳುನಾಡಿನ ಶ್ರೀಪೆರಂಬೂದೂರಿನಲ್ಲಿರುವ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.</p>.<p>ಈ ಕುರಿತು ವಿಡಿಯೊ ಮತ್ತು ಫೋಟೊಗಳನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಅವರು, ‘ಪ್ರೀತಿ ದ್ವೇಷವನ್ನು ಜಯಿಸುತ್ತದೆ. ಭರವಸೆ ಭಯವನ್ನು ಸೋಲಿಸುತ್ತದೆ. ಒಟ್ಟಾಗಿ ನಾವು ಜಯ ಸಾಧಿಸುತ್ತೇವೆ’ ಎಂದು ಹೇಳಿದ್ದಾರೆ.</p>.<p>3,570 ಕಿ.ಮೀ. ಸಂಚರಿಸಲಿರುವ ‘ಭಾರತ್ ಜೋಡೊ’ ಯಾತ್ರೆಯು ಆರ್ಥಿಕ ಅಸಮಾನತೆ, ಸಾಮಾಜಿಕ ಧ್ರುವೀಕರಣ, ರಾಜಕೀಯ ಕೇಂದ್ರೀಕರಣ ಸೇರಿದಂತೆ ದೇಶವನ್ನು ಬಾಧಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ ಎಂದು ಪಕ್ಷ ಹೇಳಿದೆ.</p>.<p>ರಾಹುಲ್ ಗಾಂಧಿ ಅವರಿಗೆ ಹಲವು ರಾಜ್ಯಗಳ ಕಾಂಗ್ರೆಸ್ ನಾಯಕರು ಸಾಥ್ ನೀಡಿದ್ದರು.</p>.<p><strong>ಓದಿ...</strong></p>.<p><a href="https://www.prajavani.net/india-news/yatra-can-achieve-both-bharat-jodo-and-congress-jodo-shashi-tharoor-969679.html" target="_blank">ಯಾತ್ರೆಯಿಂದ ಭಾರತ ಜೋಡೊ, ಕಾಂಗ್ರೆಸ್ ಜೋಡೊ ಸಾಧ್ಯವಾಗಲಿದೆ: ಶಶಿ ತರೂರ್</a></p>.<p><a href="https://www.prajavani.net/india-news/bharat-jodo-yatra-rahul-gandhi-congress-ashok-gehlot-969988.html" target="_blank">ಧರ್ಮಗಳ ನಡುವಿನ ದ್ವೇಷ ಅಂತರ್ಯುದ್ಧಕ್ಕೆ ಕಾರಣವಾಗಬಹುದು: ಅಶೋಕ್ ಗೆಹಲೋತ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>