ಸಂಪುಟ ಪುನರ್ ರಚನೆ ಮತ್ತು ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಚೌಧರಿ,‘ ಬಿಜೆಪಿ ಈ ಮೂಲಕ ಕೇವಲ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ. ಉತ್ತರ ಪ್ರದೇಶ ಸರ್ಕಾರವು ಕೋವಿಡ್ ಪರಿಸ್ಥಿತಿಯನ್ನು ಸರಿಯಾದ ರೀತಿಯಲ್ಲಿ ನಿಭಾಯಿಸಿಲ್ಲ. ಅಲ್ಲದೆ ಗಂಗಾ ನದಿಯಲ್ಲಿ ತೇಲಿ ಬಂದ ಶವಗಳ ಬಗ್ಗೆ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಈಗ ಬಿಜೆಪಿಯು ನಾಯಕತ್ವ ಬದಲಾವಣೆಯ ಹೆಸರಿನಲ್ಲಿ ತಮ್ಮ ವೈಫಲ್ಯಗಳನ್ನು ಮರೆಮಾಚಲು ಪ್ರಯತ್ನಿಸುತ್ತಿದೆ’ ಎಂದರು.