<p><strong>ಚೆನ್ನೈ</strong>: ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ಸೃಷ್ಟಿಯಾಗುತ್ತಿದೆ. ಇದು ಬುಧವಾರದ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದ್ದು, ತಮಿಳುನಾಡಿನ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ.</p>.<p>ರಾಜ್ಯದ ಉತ್ತರ ಭಾಗದ ಜಿಲ್ಲೆಗಳು ಹಾಗೂ ಕಾವೇರಿ ನದಿ ಪಾತ್ರದ ಪ್ರದೇಶಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯ ಕಾರಣ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು (ಎನ್ಡಿಆರ್ಎಫ್) 10 ರಕ್ಷಣಾ ತಂಡಗಳನ್ನು ರಚಿಸಿದೆ.</p>.<p>ಚೆನ್ನೈ, ನಾಗಪಟ್ಟಣ, ಚೆಂಗಲ್ಪಟ್ಟು, ತಂಜಾವೂರು, ತಿರುವರೂರ್, ಕಡಲೂರು, ವಿಲ್ಲುಪುರಂ, ಮೈಲಾದುತುರೈ, ತಿರುವಳ್ಳೂರು ಹಾಗೂ ಕಾಂಚಿಪುರ ಜಿಲ್ಲೆಗಳಿಗೆ ಈ ತಂಡಗಳನ್ನು ಕಳುಹಿಸಲಾಗಿದ್ದು, ಯಾವುದೇ ಅವಘಡವನ್ನು ಎದುರಿಸಲು ಸಜ್ಜಾಗಿರುವಂತೆ ಸೂಚಿಸಲಾಗಿದೆ.</p>.<p>ಪ್ರವಾಹ ಪರಿಸ್ಥಿತಿಯಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳುವುದು, ಕಟ್ಟಡಗಳು ಕುಸಿದಾಗ ಅವಶೇಷಗಳಡಿ ಸಿಲುಕಿದವರ ರಕ್ಷಣೆ, ಪ್ರತಿಕೂಲ ಪರಿಸ್ಥಿತಿಯಲ್ಲೂ ಸಂವಹನ ಸಾಧ್ಯವಾಗಿಸುವ ಸಾಧನಗಳನ್ನು ಹಾಗೂ ವೈಯಕ್ತಿಕ ರಕ್ಷಣಾ ಸಲಕರಣೆಗಳನ್ನು ಈ ತಂಡಗಳು ಹೊಂದಿವೆ.</p>.<p>ಅರಕ್ಕೋಣಂನಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದ್ದು, 24 ಗಂಟೆಗಳ ಕಾಲ ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ. ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಎಲ್ಲ ಜಿಲ್ಲಾಡಳಿತಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ.</p>.<p>‘ಸಮುದ್ರಕ್ಕಿಳಿದಿರುವ ಮೀನುಗಾರರನ್ನು ಸಂಪರ್ಕಿಸಿ, ಮಾಹಿತಿ ನೀಡಲಾಗಿದ್ದು, ಎಲ್ಲರೂ ವಾಪಸಾಗುತ್ತಿದ್ದಾರೆ’ ಎಂದು ಕಂದಾಯ ಸಚಿವ ಕೆ.ಕೆ.ಎಸ್.ಎಸ್.ಆರ್ ರಾಮಚಂದ್ರನ್ ಹೇಳಿದರು.</p>.<p>‘ರಾಜ್ಯದಲ್ಲಿ 5,200 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಚೆನ್ನೈನಲ್ಲಿ 169 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದ್ದು, ರಸ್ತೆ, ಕಟ್ಟಡಗಳಲ್ಲಿ ನಿಲ್ಲುವ ಮಳೆ ನೀರು ತೆರವಿಗೆ 805 ಪಂಪ್ಸೆಟ್ಗಳನ್ನು ಸಿದ್ಧತೆಯಲ್ಲಿಡಲಾಗಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ಸೃಷ್ಟಿಯಾಗುತ್ತಿದೆ. ಇದು ಬುಧವಾರದ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದ್ದು, ತಮಿಳುನಾಡಿನ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ.</p>.<p>ರಾಜ್ಯದ ಉತ್ತರ ಭಾಗದ ಜಿಲ್ಲೆಗಳು ಹಾಗೂ ಕಾವೇರಿ ನದಿ ಪಾತ್ರದ ಪ್ರದೇಶಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯ ಕಾರಣ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು (ಎನ್ಡಿಆರ್ಎಫ್) 10 ರಕ್ಷಣಾ ತಂಡಗಳನ್ನು ರಚಿಸಿದೆ.</p>.<p>ಚೆನ್ನೈ, ನಾಗಪಟ್ಟಣ, ಚೆಂಗಲ್ಪಟ್ಟು, ತಂಜಾವೂರು, ತಿರುವರೂರ್, ಕಡಲೂರು, ವಿಲ್ಲುಪುರಂ, ಮೈಲಾದುತುರೈ, ತಿರುವಳ್ಳೂರು ಹಾಗೂ ಕಾಂಚಿಪುರ ಜಿಲ್ಲೆಗಳಿಗೆ ಈ ತಂಡಗಳನ್ನು ಕಳುಹಿಸಲಾಗಿದ್ದು, ಯಾವುದೇ ಅವಘಡವನ್ನು ಎದುರಿಸಲು ಸಜ್ಜಾಗಿರುವಂತೆ ಸೂಚಿಸಲಾಗಿದೆ.</p>.<p>ಪ್ರವಾಹ ಪರಿಸ್ಥಿತಿಯಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳುವುದು, ಕಟ್ಟಡಗಳು ಕುಸಿದಾಗ ಅವಶೇಷಗಳಡಿ ಸಿಲುಕಿದವರ ರಕ್ಷಣೆ, ಪ್ರತಿಕೂಲ ಪರಿಸ್ಥಿತಿಯಲ್ಲೂ ಸಂವಹನ ಸಾಧ್ಯವಾಗಿಸುವ ಸಾಧನಗಳನ್ನು ಹಾಗೂ ವೈಯಕ್ತಿಕ ರಕ್ಷಣಾ ಸಲಕರಣೆಗಳನ್ನು ಈ ತಂಡಗಳು ಹೊಂದಿವೆ.</p>.<p>ಅರಕ್ಕೋಣಂನಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದ್ದು, 24 ಗಂಟೆಗಳ ಕಾಲ ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ. ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಎಲ್ಲ ಜಿಲ್ಲಾಡಳಿತಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ.</p>.<p>‘ಸಮುದ್ರಕ್ಕಿಳಿದಿರುವ ಮೀನುಗಾರರನ್ನು ಸಂಪರ್ಕಿಸಿ, ಮಾಹಿತಿ ನೀಡಲಾಗಿದ್ದು, ಎಲ್ಲರೂ ವಾಪಸಾಗುತ್ತಿದ್ದಾರೆ’ ಎಂದು ಕಂದಾಯ ಸಚಿವ ಕೆ.ಕೆ.ಎಸ್.ಎಸ್.ಆರ್ ರಾಮಚಂದ್ರನ್ ಹೇಳಿದರು.</p>.<p>‘ರಾಜ್ಯದಲ್ಲಿ 5,200 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಚೆನ್ನೈನಲ್ಲಿ 169 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದ್ದು, ರಸ್ತೆ, ಕಟ್ಟಡಗಳಲ್ಲಿ ನಿಲ್ಲುವ ಮಳೆ ನೀರು ತೆರವಿಗೆ 805 ಪಂಪ್ಸೆಟ್ಗಳನ್ನು ಸಿದ್ಧತೆಯಲ್ಲಿಡಲಾಗಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>