ನವದೆಹಲಿ: ಚಳಿಗಾಲದ ಅಧಿವೇಶನ ಕುರಿತು ಚರ್ಚಿಸಲು ಬುಧವಾರ ನಡೆಯಲಿರುವ ಮಂತ್ರಿ ಪರಿಷತ್ ಸಭೆಗೆ ರಾಜ್ಯಸಭೆಯ ಸಭಾಪತಿ ಮತ್ತು ಲೋಕಸಭೆಯ ಸ್ಪೀಕರ್ ಅವರನ್ನು ವಿಶೇಷ ಅತಿಥಿಗಳನ್ನಾಗಿ ಆಹ್ವಾನಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಆಡಳಿತದಲ್ಲಿ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಚಿವರಿಗೆ ನೆರವಾಗುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸರಣಿ ಸಭೆಗಳನ್ನು ನಡೆಸಲಾಗಿದೆ. ಚಿಂತನ ಶಿಬಿರ ರೂಪದಲ್ಲಿ ಮಂತ್ರಿ ಪರಿಷತ್ ಸಭೆ ನಡೆಯಲಿದ್ದು,ಇದು ಈ ವರ್ಷದ ಕೊನೆಯ ಸಭೆಯಾಗಲಿದೆ.