<p><strong>ಚಂಡೀಗಡ: </strong>ಲುಧಿಯಾನದ ನ್ಯಾಯಾಲಯದಲ್ಲಿ ಸಂಭವಿಸಿದ ಬಾಂಬ್ ಸ್ಫೋಟವು ಗಾಬರಿ ಹುಟ್ಟಿಸುವ ಮತ್ತು ಭಯಾನಕ ಕೃತ್ಯವೆಂದು ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಹೇಳಿದ್ದಾರೆ.</p>.<p>ರಾಜ್ಯದ ಶಾಂತಿಯುತ ವಾತಾವರಣವನ್ನು ಹದಗೆಡಿಸಲು ಶತ್ರುಗಳು ಈ ಸಂಚು ರೂಪಿಸಿದ್ದಾರೆ. ಅದರಲ್ಲಿ ಅವರು ಯಶಸ್ವಿಯಾಗುವುದಿಲ್ಲ ಎಂದು ಚನ್ನಿ ಕಿಡಿ ಕಾರಿದ್ದಾರೆ.</p>.<p>ಘಟನೆಯನ್ನು ತೀವ್ರವಾಗಿ ಖಂಡಿಸಿದ ಅವರು, ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಯಾರು ಈ ರೀತಿಯ ಸಂಚು ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ರಾಜ್ಯದಲ್ಲಿ ಪರಿಶ್ರಮದ ಬಳಿಕ ನೆಲೆಯೂರಿರುವ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಲು ಯತ್ನ ನಡೆಯುತ್ತಿದೆ ಎಂದು ಅವರ ಆರೋಪಿಸಿದರು.</p>.<p>‘ಇಂತಹ ಕಿಡಿಗೇಡಿ ಕೃತ್ಯಗಳನ್ನು ಪ್ರತಿಯೊಬ್ಬರೂ ಖಂಡಿಸುವ ಸಮಯವಿದು’ಎಂದಿರುವ ಅವರು, ಈ ಹೇಡಿತನದ ಮತ್ತು ಅಮಾನವೀಯ ಕೃತ್ಯದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶಿಸಿರುವುದಾಗಿ ಹೇಳಿದರು. ಮುಂದೆ ಯಾರೂ ಈ ರೀತಿಯ ಕೃತ್ಯಕ್ಕೆ ಮುಂದಾಗದಂತೆ ಎಚ್ಚರಿಕೆ ನೀಡಲು ಅಪರಾಧಿಗಳಿಗೆ ತಕ್ಕ ಶಿಕ್ಷೆ ವಿಧಿಸಲಾಗುವುದು ಎಂದಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಹಾಳುಗೆಡವುವ ಇಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.</p>.<p>ರಾಜ್ಯದ ಸೌಹಾರ್ದತೆ, ಭ್ರಾತೃತ್ವ, ಶಾಂತಿ ಕದಡುವ ಸಮಾಜ ವಿರೋಧಿ ಶಕ್ತಿಗಳ ಬಗ್ಗೆ ಜನ ಜಾಗರೂಕರಾಗಿರಬೇಕು. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಅಮಾಯಕರನ್ನು ಗುರುಯಾಗಿಸಿಕೊಂಡು ನಡೆಸುತ್ತಿರುವ ದಾಳಿಗಳಿಗೆ ಅವಕಾಶ ನೀಡುವುದಿಲ್ಲ. ಸಮಾಜ ವಿರೋಧಿ ಶಕ್ತಿಗಳಿಗೆ ಸದ್ಯದಲ್ಲೇ ತಕ್ಕೆ ಉತ್ತರ ನೀಡಲಾಗುವುದು ಎಂದು ಚನ್ನಿ ಹೇಳಿದ್ದಾರೆ.</p>.<p>ಇದನ್ನೂ ಓದಿ.. <a href="https://www.prajavani.net/india-news/two-killed-in-explosion-in-ludhiana-district-court-complex-895570.html"><strong>ಲುಧಿಯಾನ ಜಿಲ್ಲಾ ನ್ಯಾಯಾಲಯದಲ್ಲಿ ಸ್ಫೋಟ: ಇಬ್ಬರು ಸಾವು, ಮೂವರಿಗೆ ಗಾಯ</strong></a><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ: </strong>ಲುಧಿಯಾನದ ನ್ಯಾಯಾಲಯದಲ್ಲಿ ಸಂಭವಿಸಿದ ಬಾಂಬ್ ಸ್ಫೋಟವು ಗಾಬರಿ ಹುಟ್ಟಿಸುವ ಮತ್ತು ಭಯಾನಕ ಕೃತ್ಯವೆಂದು ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಹೇಳಿದ್ದಾರೆ.</p>.<p>ರಾಜ್ಯದ ಶಾಂತಿಯುತ ವಾತಾವರಣವನ್ನು ಹದಗೆಡಿಸಲು ಶತ್ರುಗಳು ಈ ಸಂಚು ರೂಪಿಸಿದ್ದಾರೆ. ಅದರಲ್ಲಿ ಅವರು ಯಶಸ್ವಿಯಾಗುವುದಿಲ್ಲ ಎಂದು ಚನ್ನಿ ಕಿಡಿ ಕಾರಿದ್ದಾರೆ.</p>.<p>ಘಟನೆಯನ್ನು ತೀವ್ರವಾಗಿ ಖಂಡಿಸಿದ ಅವರು, ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಯಾರು ಈ ರೀತಿಯ ಸಂಚು ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ರಾಜ್ಯದಲ್ಲಿ ಪರಿಶ್ರಮದ ಬಳಿಕ ನೆಲೆಯೂರಿರುವ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಲು ಯತ್ನ ನಡೆಯುತ್ತಿದೆ ಎಂದು ಅವರ ಆರೋಪಿಸಿದರು.</p>.<p>‘ಇಂತಹ ಕಿಡಿಗೇಡಿ ಕೃತ್ಯಗಳನ್ನು ಪ್ರತಿಯೊಬ್ಬರೂ ಖಂಡಿಸುವ ಸಮಯವಿದು’ಎಂದಿರುವ ಅವರು, ಈ ಹೇಡಿತನದ ಮತ್ತು ಅಮಾನವೀಯ ಕೃತ್ಯದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶಿಸಿರುವುದಾಗಿ ಹೇಳಿದರು. ಮುಂದೆ ಯಾರೂ ಈ ರೀತಿಯ ಕೃತ್ಯಕ್ಕೆ ಮುಂದಾಗದಂತೆ ಎಚ್ಚರಿಕೆ ನೀಡಲು ಅಪರಾಧಿಗಳಿಗೆ ತಕ್ಕ ಶಿಕ್ಷೆ ವಿಧಿಸಲಾಗುವುದು ಎಂದಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಹಾಳುಗೆಡವುವ ಇಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.</p>.<p>ರಾಜ್ಯದ ಸೌಹಾರ್ದತೆ, ಭ್ರಾತೃತ್ವ, ಶಾಂತಿ ಕದಡುವ ಸಮಾಜ ವಿರೋಧಿ ಶಕ್ತಿಗಳ ಬಗ್ಗೆ ಜನ ಜಾಗರೂಕರಾಗಿರಬೇಕು. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಅಮಾಯಕರನ್ನು ಗುರುಯಾಗಿಸಿಕೊಂಡು ನಡೆಸುತ್ತಿರುವ ದಾಳಿಗಳಿಗೆ ಅವಕಾಶ ನೀಡುವುದಿಲ್ಲ. ಸಮಾಜ ವಿರೋಧಿ ಶಕ್ತಿಗಳಿಗೆ ಸದ್ಯದಲ್ಲೇ ತಕ್ಕೆ ಉತ್ತರ ನೀಡಲಾಗುವುದು ಎಂದು ಚನ್ನಿ ಹೇಳಿದ್ದಾರೆ.</p>.<p>ಇದನ್ನೂ ಓದಿ.. <a href="https://www.prajavani.net/india-news/two-killed-in-explosion-in-ludhiana-district-court-complex-895570.html"><strong>ಲುಧಿಯಾನ ಜಿಲ್ಲಾ ನ್ಯಾಯಾಲಯದಲ್ಲಿ ಸ್ಫೋಟ: ಇಬ್ಬರು ಸಾವು, ಮೂವರಿಗೆ ಗಾಯ</strong></a><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>