<p class="title"><strong>ಲಖನೌ: </strong>ಇಲ್ಲಿನ ಲುಲು ಮಾಲ್ನಲ್ಲಿ ಮುಸ್ಲಿಂ ಯುವಕರು ನಮಾಜ್ ಮಾಡಿದ್ದಾರೆಂದು ಆರೋಪಿಸಿ ಮಾಲ್ ಅನ್ನು ‘ಪವಿತ್ರ’ಗೊಳಿಸಲು ತೆರಳಿದ ಆರೋಪ ಸಂಬಂಧ ಅಯೋಧ್ಯೆ ಮೂಲದ ಸಂತ ಪರಮಹಂಸ ಆಚಾರ್ಯ ಎಂಬುವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.<br /><br />ಇತ್ತೀಚೆಗೆ ಲುಲು ಮಾಲ್ನಲ್ಲಿ ಯುವಕರು ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದನ್ನು ವಿರೋಧಿಸಿ ಕೇಸರಿ ಕಾರ್ಯಕರ್ತರು ಪ್ರಕರಣ ದಾಖಲಿಸಿ, ಮಾಲ್ನಲ್ಲಿ ಹನುಮಾನ್ ಚಾಲೀಸಾ ಪಠಣಕ್ಕೆ ಮುಂದಾಗಿದ್ದರು. ಸದ್ಯ ಚಾಲೀಸಾ ಪಠಣಕ್ಕೆ ಮುಂದಾದವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p class="title">ಅಲ್ಲದೆ ನಮಾಜ್ ಮಾಡಿದ ಆರೋಪ ಸಂಬಂಧ ಮಹಮ್ಮದ್ ರೆಹಾನ್, ಅತೀಫ್ ಖಾನ್, ಮಹಮ್ಮದ್ ಲುಕ್ಮಾನ್ ಮತ್ತು ಮಹಮ್ಮದ್ ನೂಮನ್ ಎಂಬವರನ್ನೂ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.</p>.<p class="title">ಘಟನೆ ನಂತರ ಮಾಲ್ ಸುತ್ತಮುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="title">ರಾಜ್ಯದಲ್ಲಿ ಮಾಲ್ಗಳು ರಾಜಕೀಯ ಕುರುಕ್ಷೇತ್ರಗಳಾಗುತ್ತಿವೆ. ಕೋಮು ಸಾಮರಸ್ಯ ಕದಡಲು ಯತ್ನಿಸುವ ಸಣ್ಣ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಕ್ರಮ ಕೈಗೊಳ್ಳಿ ಎಂದು ಈಚೆಗೆಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪೊಲೀಸರಿಗೆ ಸೂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಲಖನೌ: </strong>ಇಲ್ಲಿನ ಲುಲು ಮಾಲ್ನಲ್ಲಿ ಮುಸ್ಲಿಂ ಯುವಕರು ನಮಾಜ್ ಮಾಡಿದ್ದಾರೆಂದು ಆರೋಪಿಸಿ ಮಾಲ್ ಅನ್ನು ‘ಪವಿತ್ರ’ಗೊಳಿಸಲು ತೆರಳಿದ ಆರೋಪ ಸಂಬಂಧ ಅಯೋಧ್ಯೆ ಮೂಲದ ಸಂತ ಪರಮಹಂಸ ಆಚಾರ್ಯ ಎಂಬುವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.<br /><br />ಇತ್ತೀಚೆಗೆ ಲುಲು ಮಾಲ್ನಲ್ಲಿ ಯುವಕರು ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದನ್ನು ವಿರೋಧಿಸಿ ಕೇಸರಿ ಕಾರ್ಯಕರ್ತರು ಪ್ರಕರಣ ದಾಖಲಿಸಿ, ಮಾಲ್ನಲ್ಲಿ ಹನುಮಾನ್ ಚಾಲೀಸಾ ಪಠಣಕ್ಕೆ ಮುಂದಾಗಿದ್ದರು. ಸದ್ಯ ಚಾಲೀಸಾ ಪಠಣಕ್ಕೆ ಮುಂದಾದವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p class="title">ಅಲ್ಲದೆ ನಮಾಜ್ ಮಾಡಿದ ಆರೋಪ ಸಂಬಂಧ ಮಹಮ್ಮದ್ ರೆಹಾನ್, ಅತೀಫ್ ಖಾನ್, ಮಹಮ್ಮದ್ ಲುಕ್ಮಾನ್ ಮತ್ತು ಮಹಮ್ಮದ್ ನೂಮನ್ ಎಂಬವರನ್ನೂ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.</p>.<p class="title">ಘಟನೆ ನಂತರ ಮಾಲ್ ಸುತ್ತಮುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="title">ರಾಜ್ಯದಲ್ಲಿ ಮಾಲ್ಗಳು ರಾಜಕೀಯ ಕುರುಕ್ಷೇತ್ರಗಳಾಗುತ್ತಿವೆ. ಕೋಮು ಸಾಮರಸ್ಯ ಕದಡಲು ಯತ್ನಿಸುವ ಸಣ್ಣ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಕ್ರಮ ಕೈಗೊಳ್ಳಿ ಎಂದು ಈಚೆಗೆಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪೊಲೀಸರಿಗೆ ಸೂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>