ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷದ ಹಿರಿಮೆ ಪುನರ್ ಸ್ಥಾಪಿಸುವೆ: ಶಶಿಕಲಾ

Last Updated 27 ಜೂನ್ 2021, 14:46 IST
ಅಕ್ಷರ ಗಾತ್ರ

ಚೆನ್ನೈ: ಎಂ.ಜಿ ರಾಮಚಂದ್ರನ್ ಮತ್ತು ಜೆ.ಜಯಲಲಿತಾ ಅವರ ಅವಧಿಯಲ್ಲಿ ಪಕ್ಷವುಹೊಂದಿದ್ದ ಹಿರಿಮೆಯನ್ನು ಪುನರ್‌ ಸ್ಥಾಪಿಸುವುದಾಗಿ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ.ಕೆ.ಶಶಿಕಲಾ ಅವರು ಭಾನುವಾರ ಭರವಸೆ ನೀಡಿದ್ದಾರೆ.

ವಿರೋಧ ಪಕ್ಷದ ನಾಯಕ ಕೆ.ಪಳನಿಸ್ವಾಮಿ ಅವರು ಪ್ರತಿನಿಧಿಸುವ ಎಡಪ್ಪಡಿ ವಿಧಾನಸಭಾ ಕ್ಷೇತ್ರದಲ್ಲಿನ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿದ ಅವರು, ‘ಎಐಎಡಿಎಂಕೆಗೆ ಮರಳಲು ದೃಢ ನಿಶ್ಚಯ ಮಾಡಿದ್ದು, ಪಕ್ಷದ ಭವಿಷ್ಯದ ಕುರಿತು ಚಿಂತೆ ಮಾಡಬೇಡಿ’ ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ.

ಪಕ್ಷವು ಒಂದು ನಿರ್ದಿಷ್ಟ ಜಾತಿಯ ಕಡೆಗೆ ವಾಲುತ್ತಿರುವ ಕುರಿತು ಪಕ್ಷದ ಕಾರ್ಯಕರ್ತ ಬಾಲು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಶಿಕಲಾ ಅವರು, ‘ಕೊಂಗು ಪ್ರದೇಶದ ಜನರು ಎಐಎಡಿಎಂಕೆಗೆ ತೋರಿಸಿದ ಬೆಂಬಲ ಮತ್ತು ಪ್ರೀತಿಗೆ ಪ್ರತಿಫಲ ತೋರಿಸುವ ಸಲುವಾಗಿ ಪಳನಿಸ್ವಾಮಿ ಅವರನ್ನು ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದೆ. ಆ ಸಮಯದಲ್ಲಿ ಬೇರೆ ಆಲೋಚನೆಯನ್ನೇ ನಾನು ಮಾಡಲಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT