ಉತ್ತರ ಪ್ರದೇಶದ ಚುನಾವಣೆಯಲ್ಲಿ ಗಂಭೀರವಾದ ಅಕ್ರಮ ನಡೆದಿದೆ ಎಂದು ಶಶಿ ತರೂರ್ ಅವರ ಚುನಾವಣಾ ಏಜೆಂಟ್, ಕಾಂಗ್ರೆಸ್ನ ಕೇಂದ್ರೀಯ ಚುನಾವಣಾ ಪ್ರಾಧಿಕಾರದ ಮುಖ್ಯಸ್ಥ ಮಧುಸೂದನ್ ಮಿಸ್ತ್ರಿ ಅವರಿಗೆ ದೂರು ಸಲ್ಲಿಸಿದ್ದರು. ಉತ್ತರ ಪ್ರದೇಶದಲ್ಲಿ ಹಾಕಲಾಗಿರುವ ಎಲ್ಲ ಮತಗಳನ್ನು ಅಮಾನ್ಯ ಮಾಡುವಂತೆ ಅವರು ಒತ್ತಾಯಿಸಿದ್ದರು.