<p><strong>ಇಂದೋರ್:</strong> ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಆರ್ಎಸ್ಎಸ್ ನಾಯಕ ಡಾ.ಕೇಶವ್ ಹೆಡ್ಗೆವಾರ್ ಮತ್ತು ಜನಸಂಘದ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಕುರಿತು ಬೋಧಿಸುವ ಮಧ್ಯಪ್ರದೇಶ ಬಿಜೆಪಿ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಖಂಡಿಸಿದೆ.</p>.<p>ಮಾಧ್ಯಮದವರೊಂದಿಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ಸಜ್ಜನ್ ಸಿಂಗ್ ವರ್ಮಾ, ʼಇದೀಗ ವೈದ್ಯರು ಆಪರೇಷನ್ ಟೇಬಲ್ ಮೇಲೆ ಹೆಡ್ಗೆವಾರ್ ಮತ್ತು ಉಪಾಧ್ಯಾಯ ಅವರ ಪುಸ್ತಕಗಳನ್ನು ಇಟ್ಟುಕೊಂಡು ಆಪರೇಷನ್ ಮಾಡಲಿದ್ದಾರೆʼ ಎಂದು ಕುಟುಕಿದ್ದಾರೆ.</p>.<p>ಮುಂದುವರಿದು, ʼಆರ್ಎಸ್ಎಸ್ನ ಸಿದ್ಧಾಂತವನ್ನು ಹೇರಲು ಬಿಜೆಪಿಯವರು ದೇಶವನ್ನು ವಿಭಜಿಸಬಹುದುʼ ಎಂದೂ ಆರೋಪಿಸಿದ್ದಾರೆ.</p>.<p>ವ್ಯಾಪಂ ಹಗರಣದ ಬಗ್ಗೆ ಮಾತನಾಡಿದ ವರ್ಮಾ, ದೇಶದ ಜನರು ವೈದ್ಯರನ್ನು ದೇವಧೂತರೆಂದು ಭಾವಿಸುತ್ತಾರೆ. ಆದರೆ, ಮಧ್ಯಪ್ರದೇಶದಲ್ಲಿನ ವ್ಯಾಪಂ ಹಗರಣ ವೈದ್ಯರನ್ನು ದೇವಧೂತರ ಬದಲು ದೆವ್ವಗಳನ್ನಾಗಿಸಿದೆʼ ಎಂದು ಪ್ರತಿಕ್ರಿಯಿಸಿದ್ದಾರೆ.</p>.<p>ಮಧ್ಯಪ್ರದೇಶ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ ಸಾರಂಗ್ ಅವರು, ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಆರ್ಎಸ್ಎಸ್ ಸಂಸ್ಥಾಪಕ ಡಾ.ಕೇಶವ ಹೆಡ್ಗೆವಾರ್ ಮತ್ತು ಜನಸಂಘದ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಬಗ್ಗೆ ಕಲಿಸಲಾಗುವುದು ಎಂದು ಭಾನುವಾರ ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್:</strong> ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಆರ್ಎಸ್ಎಸ್ ನಾಯಕ ಡಾ.ಕೇಶವ್ ಹೆಡ್ಗೆವಾರ್ ಮತ್ತು ಜನಸಂಘದ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಕುರಿತು ಬೋಧಿಸುವ ಮಧ್ಯಪ್ರದೇಶ ಬಿಜೆಪಿ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಖಂಡಿಸಿದೆ.</p>.<p>ಮಾಧ್ಯಮದವರೊಂದಿಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ಸಜ್ಜನ್ ಸಿಂಗ್ ವರ್ಮಾ, ʼಇದೀಗ ವೈದ್ಯರು ಆಪರೇಷನ್ ಟೇಬಲ್ ಮೇಲೆ ಹೆಡ್ಗೆವಾರ್ ಮತ್ತು ಉಪಾಧ್ಯಾಯ ಅವರ ಪುಸ್ತಕಗಳನ್ನು ಇಟ್ಟುಕೊಂಡು ಆಪರೇಷನ್ ಮಾಡಲಿದ್ದಾರೆʼ ಎಂದು ಕುಟುಕಿದ್ದಾರೆ.</p>.<p>ಮುಂದುವರಿದು, ʼಆರ್ಎಸ್ಎಸ್ನ ಸಿದ್ಧಾಂತವನ್ನು ಹೇರಲು ಬಿಜೆಪಿಯವರು ದೇಶವನ್ನು ವಿಭಜಿಸಬಹುದುʼ ಎಂದೂ ಆರೋಪಿಸಿದ್ದಾರೆ.</p>.<p>ವ್ಯಾಪಂ ಹಗರಣದ ಬಗ್ಗೆ ಮಾತನಾಡಿದ ವರ್ಮಾ, ದೇಶದ ಜನರು ವೈದ್ಯರನ್ನು ದೇವಧೂತರೆಂದು ಭಾವಿಸುತ್ತಾರೆ. ಆದರೆ, ಮಧ್ಯಪ್ರದೇಶದಲ್ಲಿನ ವ್ಯಾಪಂ ಹಗರಣ ವೈದ್ಯರನ್ನು ದೇವಧೂತರ ಬದಲು ದೆವ್ವಗಳನ್ನಾಗಿಸಿದೆʼ ಎಂದು ಪ್ರತಿಕ್ರಿಯಿಸಿದ್ದಾರೆ.</p>.<p>ಮಧ್ಯಪ್ರದೇಶ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ ಸಾರಂಗ್ ಅವರು, ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಆರ್ಎಸ್ಎಸ್ ಸಂಸ್ಥಾಪಕ ಡಾ.ಕೇಶವ ಹೆಡ್ಗೆವಾರ್ ಮತ್ತು ಜನಸಂಘದ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಬಗ್ಗೆ ಕಲಿಸಲಾಗುವುದು ಎಂದು ಭಾನುವಾರ ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>