ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕಿ ಶನಿವಾರ ಮಧ್ಯಾಹ್ನ ಸ್ಥಳೀಯ ಶಾಲೆಯಿಂದ ಮನೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗ್ರಾಮದ ಇತರ ಬಾಲಕಿಯರು ಶಾಲೆಗೆ ಹೋಗದ ಕಾರಣ ನೀನೂ ಹೋಗುವುದು ಬೇಡ ಎಂದು ಬಾಲಕಿಯನ್ನು ದಬಾಯಿಸಿದ ಕೆಲವು ವ್ಯಕ್ತಿಗಳು ಆಕೆಯ ಶಾಲಾ ಬ್ಯಾಗನ್ನು ಕಿತ್ತುಕೊಂಡಿದ್ದರು ಎಂದು ಕೊತ್ವಾಲಿ ಪೊಲೀಸ್ ಠಾಣೆ ಪ್ರಭಾರಿ ಅವಧೇಶ್ ಕುಮಾರ್ ಶೇಷಾ ತಿಳಿಸಿದ್ದಾರೆ.