<p><strong>ಭೋಪಾಲ್:</strong>ಮಧ್ಯಪ್ರದೇಶಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ (ಪಿಎಂಜಿಕೆವೈ) ಅಡಿಯಲ್ಲಿ ರಾಜ್ಯದಾದ್ಯಂತ 4.9 ಕೋಟಿ ಬಡವರಿಗೆ ಉಚಿತ ಅಕ್ಕಿ ವಿತರಿಸುವ ಕಾರ್ಯಕ್ರಮವನ್ನು ಶನಿವಾರ ಏರ್ಪಡಿಸಿದೆ.</p>.<p>ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರುಪಿಎಂಜಿಕೆವೈ ಕಾರ್ಯಕ್ರಮದವೇಳೆ ರಾಜ್ಯದ ಪ್ರವಾಹ ಸ್ಥಿತಿಯ ಬಗ್ಗೆಯೂ ಮಾತನಾಡಿದರು. ಪಿಎಂಜಿಕೆವೈ ಅಡಿಯಲ್ಲಿ ವಿತರಿಸುವ ಪಡಿತರ ಮಾತ್ರವಲ್ಲದೆ, ಪ್ರವಾಹ ಸಂತ್ರಸ್ತ ಕುಟುಂಬಗಳಿಗೆ ತಲಾ50ಕೆಜಿ ಆಹಾರ ಪದಾರ್ಥಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ʼಸರ್ಕಾರವು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದ46,000 ಜನರನ್ನು ರಕ್ಷಿಸಿದ್ದು,20,000 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದೆʼ ಎಂದು ಸಿಎಂಮಾಹಿತಿ ನೀಡಿದರು.</p>.<p>ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಅವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ ಹಣಕಾಸಿನ ನೆರವು ನೀಡಲಾಗುವುದು. ಇದಲ್ಲದೆ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರಿಗೆ ಪಿಎಂಎವೈಅಡಿಯಲ್ಲಿ 6,000 ರೂಪಾಯಿಗಳ ಹಣಕಾಸಿನ ನೆರವು ನೀಡುತ್ತೇವೆʼ ಎಂದೂ ಹೇಳಿದರು.</p>.<p>ರಾಜ್ಯದ ಅಧಿಕಾರಿಗಳ ಪ್ರಕಾರ, ಗ್ವಾಲಿಯರ್ ಮತ್ತು ಚಂಬಲ್ ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನಜೀವನಅಸ್ತವ್ಯಸ್ತಗೊಂಡಿದ್ದು,ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ.</p>.<p>ಪ್ರಧಾನಿ ಮೋದಿ ಅವರುಇಂದು ಮಧ್ಯಪ್ರದೇಶದಲ್ಲಿರುವ ಪಿಎಂಜಿಕೆವೈ ಫಲಾನುಭವಿಗಳೊಂದಿಗೆ ವರ್ಚುವಲ್ ಸಂವಾದ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong>ಮಧ್ಯಪ್ರದೇಶಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ (ಪಿಎಂಜಿಕೆವೈ) ಅಡಿಯಲ್ಲಿ ರಾಜ್ಯದಾದ್ಯಂತ 4.9 ಕೋಟಿ ಬಡವರಿಗೆ ಉಚಿತ ಅಕ್ಕಿ ವಿತರಿಸುವ ಕಾರ್ಯಕ್ರಮವನ್ನು ಶನಿವಾರ ಏರ್ಪಡಿಸಿದೆ.</p>.<p>ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರುಪಿಎಂಜಿಕೆವೈ ಕಾರ್ಯಕ್ರಮದವೇಳೆ ರಾಜ್ಯದ ಪ್ರವಾಹ ಸ್ಥಿತಿಯ ಬಗ್ಗೆಯೂ ಮಾತನಾಡಿದರು. ಪಿಎಂಜಿಕೆವೈ ಅಡಿಯಲ್ಲಿ ವಿತರಿಸುವ ಪಡಿತರ ಮಾತ್ರವಲ್ಲದೆ, ಪ್ರವಾಹ ಸಂತ್ರಸ್ತ ಕುಟುಂಬಗಳಿಗೆ ತಲಾ50ಕೆಜಿ ಆಹಾರ ಪದಾರ್ಥಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ʼಸರ್ಕಾರವು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದ46,000 ಜನರನ್ನು ರಕ್ಷಿಸಿದ್ದು,20,000 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದೆʼ ಎಂದು ಸಿಎಂಮಾಹಿತಿ ನೀಡಿದರು.</p>.<p>ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಅವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ ಹಣಕಾಸಿನ ನೆರವು ನೀಡಲಾಗುವುದು. ಇದಲ್ಲದೆ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರಿಗೆ ಪಿಎಂಎವೈಅಡಿಯಲ್ಲಿ 6,000 ರೂಪಾಯಿಗಳ ಹಣಕಾಸಿನ ನೆರವು ನೀಡುತ್ತೇವೆʼ ಎಂದೂ ಹೇಳಿದರು.</p>.<p>ರಾಜ್ಯದ ಅಧಿಕಾರಿಗಳ ಪ್ರಕಾರ, ಗ್ವಾಲಿಯರ್ ಮತ್ತು ಚಂಬಲ್ ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನಜೀವನಅಸ್ತವ್ಯಸ್ತಗೊಂಡಿದ್ದು,ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ.</p>.<p>ಪ್ರಧಾನಿ ಮೋದಿ ಅವರುಇಂದು ಮಧ್ಯಪ್ರದೇಶದಲ್ಲಿರುವ ಪಿಎಂಜಿಕೆವೈ ಫಲಾನುಭವಿಗಳೊಂದಿಗೆ ವರ್ಚುವಲ್ ಸಂವಾದ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>