<p><strong>ಭೋಪಾಲ್:</strong> ಮಧ್ಯಪ್ರದೇಶದಲ್ಲಿ ಸರ್ಕಾರಿ ಉದ್ಯೋಗಗಳು ಅಲ್ಲಿನ ಸ್ಥಳೀಯರಿಗೆ ಮಾತ್ರ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ಚೌಹಾಣ್ ಮಂಗಳವಾರಘೋಷಿಸಿದ್ದಾರೆ.</p>.<p>ಮಧ್ಯಪ್ರದೇಶ ಸರ್ಕಾರ ಇವತ್ತು ಮುಖ್ಯ ತೀರ್ಮಾನವೊಂದನ್ನು ತೆಗೆದುಕೊಂಡಿದೆ. ರಾಜ್ಯದ ಯುವಜನಾಂಗಕ್ಕೆ ಮಾತ್ರ ಸರ್ಕಾರಿ ಕೆಲಸ ನೀಡುವಂತೆ ಮಾಡಲು ನಾವು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಿದ್ದೇವೆ. ಮಧ್ಯಪ್ರದೇಶದ ಸಂಪನ್ಮೂಲಗಳು ಇಲ್ಲಿನ ಮಕ್ಕಳಿಗಾಗಿ ಮಾತ್ರ ಎಂದು ಶಿವರಾಜ್ ಚೌಹಾಣ್ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ.</p>.<p>ಸರ್ಕಾರಿ ಕೆಲಸ ನೀಡುವಾಗ ಮಧ್ಯಪ್ರದೇಶದವರಿಗೆ ಆದ್ಯತೆ ನೀಡಲಾಗುವುದು.ಹತ್ತು ಮತ್ತು ಹನ್ನೆರಡನೇ ತರಗತಿಯ ಅಂಕಗಳನ್ನು ಆಧರಿಸಿ ಸ್ಥಳೀಯ ಯುವಕರಿಗೆ ನೌಕರಿ ನೀಡುವ ಕ್ರಮ ಆರಂಭಿಸಲಾಗುವುದು ಎಂದು ಚೌಹಾಣ್ ಈ ಹಿಂದೆ ಹೇಳಿದ್ದರು.</p>.<p>ಮಧ್ಯಪ್ರದೇಶದ ಯುವಕರಿಗೆ ಸರ್ಕಾರಿ ನೌಕರಿಯಲ್ಲಿ ಆದ್ಯತೆ ನೀಡಲಾಗುವುದು. ಉದ್ಯೋಗವಕಾಶಗಳು ಕಡಿಮೆಯಾಗುತ್ತಿರುವ ಹೊತ್ತಲ್ಲಿ ನಮ್ಮ ಯುವಕರ ಬಗ್ಗೆ ಕಾಳಜಿ ವಹಿಸಬೇಕಾದುದುನಮ್ಮ ಕರ್ತವ್ಯ ಎಂದು ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯದ ಜನರನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಚೌಹಾಣ್ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ಮಧ್ಯಪ್ರದೇಶದಲ್ಲಿ ಸರ್ಕಾರಿ ಉದ್ಯೋಗಗಳು ಅಲ್ಲಿನ ಸ್ಥಳೀಯರಿಗೆ ಮಾತ್ರ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ಚೌಹಾಣ್ ಮಂಗಳವಾರಘೋಷಿಸಿದ್ದಾರೆ.</p>.<p>ಮಧ್ಯಪ್ರದೇಶ ಸರ್ಕಾರ ಇವತ್ತು ಮುಖ್ಯ ತೀರ್ಮಾನವೊಂದನ್ನು ತೆಗೆದುಕೊಂಡಿದೆ. ರಾಜ್ಯದ ಯುವಜನಾಂಗಕ್ಕೆ ಮಾತ್ರ ಸರ್ಕಾರಿ ಕೆಲಸ ನೀಡುವಂತೆ ಮಾಡಲು ನಾವು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಿದ್ದೇವೆ. ಮಧ್ಯಪ್ರದೇಶದ ಸಂಪನ್ಮೂಲಗಳು ಇಲ್ಲಿನ ಮಕ್ಕಳಿಗಾಗಿ ಮಾತ್ರ ಎಂದು ಶಿವರಾಜ್ ಚೌಹಾಣ್ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ.</p>.<p>ಸರ್ಕಾರಿ ಕೆಲಸ ನೀಡುವಾಗ ಮಧ್ಯಪ್ರದೇಶದವರಿಗೆ ಆದ್ಯತೆ ನೀಡಲಾಗುವುದು.ಹತ್ತು ಮತ್ತು ಹನ್ನೆರಡನೇ ತರಗತಿಯ ಅಂಕಗಳನ್ನು ಆಧರಿಸಿ ಸ್ಥಳೀಯ ಯುವಕರಿಗೆ ನೌಕರಿ ನೀಡುವ ಕ್ರಮ ಆರಂಭಿಸಲಾಗುವುದು ಎಂದು ಚೌಹಾಣ್ ಈ ಹಿಂದೆ ಹೇಳಿದ್ದರು.</p>.<p>ಮಧ್ಯಪ್ರದೇಶದ ಯುವಕರಿಗೆ ಸರ್ಕಾರಿ ನೌಕರಿಯಲ್ಲಿ ಆದ್ಯತೆ ನೀಡಲಾಗುವುದು. ಉದ್ಯೋಗವಕಾಶಗಳು ಕಡಿಮೆಯಾಗುತ್ತಿರುವ ಹೊತ್ತಲ್ಲಿ ನಮ್ಮ ಯುವಕರ ಬಗ್ಗೆ ಕಾಳಜಿ ವಹಿಸಬೇಕಾದುದುನಮ್ಮ ಕರ್ತವ್ಯ ಎಂದು ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯದ ಜನರನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಚೌಹಾಣ್ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>