ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ಮುಂದಿನ ಮಹಾಶಿವರಾತ್ರಿಯಂದು ಉಜ್ಜಯಿನಿ ನಗರಕ್ಕೆ ಸಿಂಗಾರ

Last Updated 6 ನವೆಂಬರ್ 2021, 8:21 IST
ಅಕ್ಷರ ಗಾತ್ರ

ಭೋಪಾಲ್‌, ಮಧ್ಯಪ್ರದೇಶ: ಮುಂದಿನ ವರ್ಷದ ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಶಿವನ ಪ್ರಸಿದ್ಧ ಮಹಾಕಾಳೇಶ್ವರ ದೇವಾಲಯವಿರುವ ಉಜ್ಜಯಿನಿ ನಗರವನ್ನು ವಿಶೇಷವಾಗಿ ಅಲಂಕರಿಸಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್‌ ಘೋಷಿಸಿದ್ದಾರೆ.

ಮುಂದಿನ ವರ್ಷ ಮಾರ್ಚ್‌ 1 ರಂದು ಮಹಾಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತದೆ.

‘ಉಜ್ಜಯಿನಿ ಒಂದು ಅದ್ಭುತ ನಗರವಾಗಿದ್ದು ಮುಂದಿನ ವರ್ಷದ ಮಹಾಶಿವರಾತ್ರಿಗೂ ಮೊದಲು ಮಹಾಕಾಳ ಶಿವನ ನಗರವನ್ನು ಅಲಂಕರಿಸಲಾಗುವುದು. ಇದು ಹಬ್ಬದ ಸಂಭ್ರಮವನ್ನು ಹೆಚ್ಚಿಸುವುದು’ ಎಂದು ಚೌಹಾಣ್‌ ಹೇಳಿದರು.

ಉಜ್ಜಯಿನಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಾಧು–ಸಂತರ ಸನ್ಮಾನ ಕಾರ್ಯಕ್ರಮದಲ್ಲಿ ಚೌಹಾಣ್ ಈ ವಿಷಯ ತಿಳಿಸಿದರು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT