ಶನಿವಾರ, ಮಾರ್ಚ್ 25, 2023
30 °C

ಮಧ್ಯಪ್ರದೇಶ: ಮುಂದಿನ ಮಹಾಶಿವರಾತ್ರಿಯಂದು ಉಜ್ಜಯಿನಿ ನಗರಕ್ಕೆ ಸಿಂಗಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭೋಪಾಲ್‌, ಮಧ್ಯಪ್ರದೇಶ: ಮುಂದಿನ ವರ್ಷದ ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಶಿವನ ಪ್ರಸಿದ್ಧ ಮಹಾಕಾಳೇಶ್ವರ ದೇವಾಲಯವಿರುವ ಉಜ್ಜಯಿನಿ ನಗರವನ್ನು ವಿಶೇಷವಾಗಿ ಅಲಂಕರಿಸಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್‌ ಘೋಷಿಸಿದ್ದಾರೆ. 

ಮುಂದಿನ ವರ್ಷ ಮಾರ್ಚ್‌ 1 ರಂದು ಮಹಾಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತದೆ. 

‘ಉಜ್ಜಯಿನಿ ಒಂದು ಅದ್ಭುತ ನಗರವಾಗಿದ್ದು ಮುಂದಿನ ವರ್ಷದ ಮಹಾಶಿವರಾತ್ರಿಗೂ ಮೊದಲು ಮಹಾಕಾಳ ಶಿವನ ನಗರವನ್ನು ಅಲಂಕರಿಸಲಾಗುವುದು. ಇದು ಹಬ್ಬದ ಸಂಭ್ರಮವನ್ನು ಹೆಚ್ಚಿಸುವುದು’ ಎಂದು ಚೌಹಾಣ್‌ ಹೇಳಿದರು.

ಉಜ್ಜಯಿನಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಾಧು–ಸಂತರ ಸನ್ಮಾನ ಕಾರ್ಯಕ್ರಮದಲ್ಲಿ ಚೌಹಾಣ್ ಈ ವಿಷಯ ತಿಳಿಸಿದರು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು