<p><strong>ಭೋಪಾಲ್</strong>: ಮಧ್ಯ ಪ್ರದೇಶದಲ್ಲಿ ಕೋವಿಡ್ 19 ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ವಿವಿಧ ಕ್ರಮಗಳನ್ನು ಕೈಗೊಂಡಿದ್ದು, ಅರ್ಹ ಪಡಿತರ ಚೀಟಿದಾರರಿಗೆ ಮುಂದಿನ ಮೂರು ತಿಂಗಳ ಅವಧಿಗೆ ಉಚಿತ ಪಡಿತರ ನೀಡಲು ಮುಂದಾಗಿದೆ.</p>.<p>ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಉಚಿತ ಪಡಿತರ ಘೋಷಣೆ ಮಾಡಿದ್ದಾರೆ.</p>.<p>ಅಲ್ಲದೆ, ಲಸಿಕೆ ಮತ್ತು ಔಷಧ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.</p>.<p>ರಾಜ್ಯದ ಎಲ್ಲ ಅರ್ಹ ಫಲಾನುಭವಿಗಳಿಗೆ ಉಚಿತ ಪಡಿತರ ನೀಡುವ ಜತೆಗೆ, ಅಗತ್ಯ ವಸ್ತುಗಳ ಲಭ್ಯತೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವ ಸಿಎಂ, ಜನರು ಅವಶ್ಯ ವಸ್ತುಗಳನ್ನು ಪಡಿತರ ವ್ಯವಸ್ಥೆ ಮೂಲಕ ಖರೀದಿಸಿ, ಆಗಾಗ ಹೊರಗಡೆ ಹೋಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.</p>.<p><a href="https://www.prajavani.net/india-news/india-planning-to-waive-import-duty-on-covid-19-vaccine-823903.html" itemprop="url">ಸೋಂಕು ಹೆಚ್ಚಳ: ಕೋವಿಡ್ ಲಸಿಕೆ ಮೇಲಿನ ಆಮದು ಶುಲ್ಕ ರದ್ದುಪಡಿಸಲಿದೆ ಭಾರತ </a></p>.<p>ಕೋವಿಡ್ ಔಷಧ, ಇಂಜೆಕ್ಷನ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ದಂಧೆಕೋರರ ವಿರುದ್ಧ ಸೂಕ್ತ ಕ್ರಮಕ್ಕೆ ಸರ್ಕಾರ ಮುಂದಾಗಿದೆ.</p>.<p><a href="https://www.prajavani.net/india-news/johnson-and-johnson-applied-for-permission-for-covid-vaccine-phase-3-trial-in-india-823907.html" itemprop="url">ಕೋವಿಡ್ 19 ಲಸಿಕೆ ಪರೀಕ್ಷಾರ್ಥ ಬಳಕೆಗೆ ಅನುಮತಿ ಕೇಳಿದ ಜಾನ್ಸನ್ ಆ್ಯಂಡ್ ಜಾನ್ಸನ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್</strong>: ಮಧ್ಯ ಪ್ರದೇಶದಲ್ಲಿ ಕೋವಿಡ್ 19 ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ವಿವಿಧ ಕ್ರಮಗಳನ್ನು ಕೈಗೊಂಡಿದ್ದು, ಅರ್ಹ ಪಡಿತರ ಚೀಟಿದಾರರಿಗೆ ಮುಂದಿನ ಮೂರು ತಿಂಗಳ ಅವಧಿಗೆ ಉಚಿತ ಪಡಿತರ ನೀಡಲು ಮುಂದಾಗಿದೆ.</p>.<p>ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಉಚಿತ ಪಡಿತರ ಘೋಷಣೆ ಮಾಡಿದ್ದಾರೆ.</p>.<p>ಅಲ್ಲದೆ, ಲಸಿಕೆ ಮತ್ತು ಔಷಧ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.</p>.<p>ರಾಜ್ಯದ ಎಲ್ಲ ಅರ್ಹ ಫಲಾನುಭವಿಗಳಿಗೆ ಉಚಿತ ಪಡಿತರ ನೀಡುವ ಜತೆಗೆ, ಅಗತ್ಯ ವಸ್ತುಗಳ ಲಭ್ಯತೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವ ಸಿಎಂ, ಜನರು ಅವಶ್ಯ ವಸ್ತುಗಳನ್ನು ಪಡಿತರ ವ್ಯವಸ್ಥೆ ಮೂಲಕ ಖರೀದಿಸಿ, ಆಗಾಗ ಹೊರಗಡೆ ಹೋಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.</p>.<p><a href="https://www.prajavani.net/india-news/india-planning-to-waive-import-duty-on-covid-19-vaccine-823903.html" itemprop="url">ಸೋಂಕು ಹೆಚ್ಚಳ: ಕೋವಿಡ್ ಲಸಿಕೆ ಮೇಲಿನ ಆಮದು ಶುಲ್ಕ ರದ್ದುಪಡಿಸಲಿದೆ ಭಾರತ </a></p>.<p>ಕೋವಿಡ್ ಔಷಧ, ಇಂಜೆಕ್ಷನ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ದಂಧೆಕೋರರ ವಿರುದ್ಧ ಸೂಕ್ತ ಕ್ರಮಕ್ಕೆ ಸರ್ಕಾರ ಮುಂದಾಗಿದೆ.</p>.<p><a href="https://www.prajavani.net/india-news/johnson-and-johnson-applied-for-permission-for-covid-vaccine-phase-3-trial-in-india-823907.html" itemprop="url">ಕೋವಿಡ್ 19 ಲಸಿಕೆ ಪರೀಕ್ಷಾರ್ಥ ಬಳಕೆಗೆ ಅನುಮತಿ ಕೇಳಿದ ಜಾನ್ಸನ್ ಆ್ಯಂಡ್ ಜಾನ್ಸನ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>