ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ (ಎಸ್ಡಿಆರ್ಎಫ್) ತಂಡಗಳಿಂದ 1,600 ಜನರನ್ನು ರಕ್ಷಿಸಲಾಗಿದೆ. 200 ಹಳ್ಳಿಗಳು ಇನ್ನೂ ಪ್ರವಾಹ ಪೀಡಿತವಾಗಿದ್ದು, ಜನರನ್ನು ರಕ್ಷಿಸಲು ದೋಣಿಗಳನ್ನು ಬಳಸಲಾಗುತ್ತಿದೆ. ಸಂತ್ರಸ್ತರನ್ನು ಪರಿಹಾರ ಶಿಬಿರಗಳಿಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.