<p><strong>ಸಿವನಿ (ಮಧ್ಯಪ್ರದೇಶ)</strong>: ಇಲ್ಲಿನ ಸಿಮರಿಯಾ ಗ್ರಾಮದಲ್ಲಿ ಗೋಹತ್ಯೆ ಮಾಡಿರುವ ಆರೋಪದಲ್ಲಿ ಇಬ್ಬರು ಬುಡಕಟ್ಟು ವ್ಯಕ್ತಿಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಹಲ್ಲೆ ವೇಳೆ ಇನ್ನೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.</p>.<p>ದಾಳಿ ನಡೆಸಿದವರು ಬಜರಂಗ ದಳದ ಕಾರ್ಯಕರ್ತರು ಎಂದು ವಿರೋಧ ಪಕ್ಷ ಕಾಂಗ್ರೆಸ್ ಆರೋಪಿಸಿದೆ.</p>.<p>ಘಟನೆ ಸೋಮವಾರ ನಡೆದಿದ್ದು, ಈ ಸಂಬಂಧ 20 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಇವರಲ್ಲಿ ಆರು ಮಂದಿಯ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.</p>.<p>‘15ರಿಂದ 20 ಜನರಿದ್ದ ಗುಂಪು ಬುಡಕಟ್ಟು ವ್ಯಕ್ತಿಗಳ ಮನೆಗೆ ತೆರಳಿ ಹಲ್ಲೆ ನಡೆಸಿದೆ. ಇವರಲ್ಲಿ ಇಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾರೆ’ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಕೆ. ಮರವಿ ತಿಳಿಸಿದ್ದಾರೆ.</p>.<p>‘ಕೆಲವು ಆರೋಪಿಗಳ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮೂವರು ಶಂಕಿತರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ. ಮೃತರ ಮನೆಯಲ್ಲಿ 12 ಕೆ.ಜಿ. ಮಾಂಸ ಪತ್ತೆಯಾಗಿದೆ’ ಎಂದಿದ್ದಾರೆ.</p>.<p>‘ಗುಂಪು ದೊಣ್ಣೆಯಿಂದ ಹಲ್ಲೆ ನಡೆಸಿ ಹತ್ಯೆಗೈದಿದೆ. ತಡೆಯಲು ಹೋದಾಗ ನನ್ನ ಮೇಲೂ ಹಲ್ಲೆ ನಡೆಸಿದೆ’ ಎಂದು ಗಾಯಾಳು ಹಾಗೂ ದೂರುದಾರ ಬ್ರಜೇಶ್ ಬಟ್ಟಿ ತಿಳಿಸಿದ್ದಾರೆ.</p>.<p>ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಜಬಲ್ಪುರ–ನಾಗಪುರ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿವನಿ (ಮಧ್ಯಪ್ರದೇಶ)</strong>: ಇಲ್ಲಿನ ಸಿಮರಿಯಾ ಗ್ರಾಮದಲ್ಲಿ ಗೋಹತ್ಯೆ ಮಾಡಿರುವ ಆರೋಪದಲ್ಲಿ ಇಬ್ಬರು ಬುಡಕಟ್ಟು ವ್ಯಕ್ತಿಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಹಲ್ಲೆ ವೇಳೆ ಇನ್ನೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.</p>.<p>ದಾಳಿ ನಡೆಸಿದವರು ಬಜರಂಗ ದಳದ ಕಾರ್ಯಕರ್ತರು ಎಂದು ವಿರೋಧ ಪಕ್ಷ ಕಾಂಗ್ರೆಸ್ ಆರೋಪಿಸಿದೆ.</p>.<p>ಘಟನೆ ಸೋಮವಾರ ನಡೆದಿದ್ದು, ಈ ಸಂಬಂಧ 20 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಇವರಲ್ಲಿ ಆರು ಮಂದಿಯ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.</p>.<p>‘15ರಿಂದ 20 ಜನರಿದ್ದ ಗುಂಪು ಬುಡಕಟ್ಟು ವ್ಯಕ್ತಿಗಳ ಮನೆಗೆ ತೆರಳಿ ಹಲ್ಲೆ ನಡೆಸಿದೆ. ಇವರಲ್ಲಿ ಇಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾರೆ’ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಕೆ. ಮರವಿ ತಿಳಿಸಿದ್ದಾರೆ.</p>.<p>‘ಕೆಲವು ಆರೋಪಿಗಳ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮೂವರು ಶಂಕಿತರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ. ಮೃತರ ಮನೆಯಲ್ಲಿ 12 ಕೆ.ಜಿ. ಮಾಂಸ ಪತ್ತೆಯಾಗಿದೆ’ ಎಂದಿದ್ದಾರೆ.</p>.<p>‘ಗುಂಪು ದೊಣ್ಣೆಯಿಂದ ಹಲ್ಲೆ ನಡೆಸಿ ಹತ್ಯೆಗೈದಿದೆ. ತಡೆಯಲು ಹೋದಾಗ ನನ್ನ ಮೇಲೂ ಹಲ್ಲೆ ನಡೆಸಿದೆ’ ಎಂದು ಗಾಯಾಳು ಹಾಗೂ ದೂರುದಾರ ಬ್ರಜೇಶ್ ಬಟ್ಟಿ ತಿಳಿಸಿದ್ದಾರೆ.</p>.<p>ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಜಬಲ್ಪುರ–ನಾಗಪುರ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>