ರಾಮನಾಥಪುರಂ ಜಿಲ್ಲೆಯಲ್ಲಿ ನಡೆದ ₹ 300 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆ ವೇಳೆ, ನ್ಯಾಯಮೂರ್ತಿಗಳಾದ ಕೆ. ಕಿರುಬಾಕರನ್ ಮತ್ತು ಪಿ. ಪುಗಲೆಂದಿ ಅವರನ್ನೊಳಗೊಂಡ ನ್ಯಾಯಪೀಠವು, ‘ಸಿಬಿಐ ಸ್ವತಂತ್ರವಾಗಿರಬೇಕು ಮತ್ತು ಅದು ಯಾವುದೇ ಸರ್ಕಾರದ ನಿಯಂತ್ರಣಕ್ಕೊಳಪಡದೇ ಸ್ವಾಯತ್ತವಾಗಿ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದೆ.