<p class="title"><strong>ಮದುರೈ:</strong> ‘ಕೇಂದ್ರ ತನಿಖಾ ದಳವು (ಸಿಬಿಐ) ಸರ್ಕಾರದ ನಿಯಂತ್ರಣಕ್ಕೊಳಪಡದೇ ಸ್ವತಂತ್ರವಾಗಿ ತನ್ನ ಕಾರ್ಯ ನಿರ್ವಹಿಸಬೇಕು. ಸಿಬಿಐನ ನಿರ್ದೇಶಕರಿಗೆ ನೇರವಾಗಿ ಪ್ರಧಾನಿಗೆ ವರದಿ ಮಾಡಿಕೊಳ್ಳುವ ವಿಶೇಷ ಅಧಿಕಾರ ನೀಡಬೇಕು’ ಎಂದು ಬುಧವಾರ ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p class="title">‘ನ್ಯಾಯಾಲಯವು ಗಂಭೀರವಾದ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಲು ಬಯಸಿದಾಗ ಅಲ್ಲಿ ಮಾನವ ಸಂಪನ್ಮೂಲ ಮತ್ತು ಹಣದ ಕೊರತೆಯ ಸಮಸ್ಯೆ ಎದುರಾಗುತ್ತದೆ’ ಎಂದೂ ಮದುರೈ ನ್ಯಾಯಪೀಠವು ಕಿಡಿಕಾರಿದೆ.</p>.<p class="title">ರಾಮನಾಥಪುರಂ ಜಿಲ್ಲೆಯಲ್ಲಿ ನಡೆದ ₹ 300 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆ ವೇಳೆ, ನ್ಯಾಯಮೂರ್ತಿಗಳಾದ ಕೆ. ಕಿರುಬಾಕರನ್ ಮತ್ತು ಪಿ. ಪುಗಲೆಂದಿ ಅವರನ್ನೊಳಗೊಂಡ ನ್ಯಾಯಪೀಠವು, ‘ಸಿಬಿಐ ಸ್ವತಂತ್ರವಾಗಿರಬೇಕು ಮತ್ತು ಅದು ಯಾವುದೇ ಸರ್ಕಾರದ ನಿಯಂತ್ರಣಕ್ಕೊಳಪಡದೇ ಸ್ವಾಯತ್ತವಾಗಿ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದೆ.</p>.<p class="title">‘ಸಿಬಿಐಗೆ ಅಮೆರಿಕದ ಎಫ್ಬಿಐ ಹಾಗೂ ಬ್ರಿಟನ್ನ ಸ್ಕಾಟ್ಲೆಂಡ್ ಯಾರ್ಡ್ನಂತೆ ಮೂಲಸೌಕರ್ಯ ಕಲ್ಪಿಸಬೇಕು. ಸಿಬಿಐಗೆ ಅಗತ್ಯವಿರುವ ಸೌಕರ್ಯ, ಸಂಪನ್ಮೂಲ, ಅಗತ್ಯ ಸಿಬ್ಬಂದಿ ನೇಮಕ ಸೇರಿದಂತೆ ಇತರ ಸೌಕರ್ಯಗಳನ್ನು ಆರು ವಾರಗಳೊಳಗೆ ಕಲ್ಪಿಸಬೇಕು’ ಎಂದೂ ನ್ಯಾಯಾಲಯವು ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮದುರೈ:</strong> ‘ಕೇಂದ್ರ ತನಿಖಾ ದಳವು (ಸಿಬಿಐ) ಸರ್ಕಾರದ ನಿಯಂತ್ರಣಕ್ಕೊಳಪಡದೇ ಸ್ವತಂತ್ರವಾಗಿ ತನ್ನ ಕಾರ್ಯ ನಿರ್ವಹಿಸಬೇಕು. ಸಿಬಿಐನ ನಿರ್ದೇಶಕರಿಗೆ ನೇರವಾಗಿ ಪ್ರಧಾನಿಗೆ ವರದಿ ಮಾಡಿಕೊಳ್ಳುವ ವಿಶೇಷ ಅಧಿಕಾರ ನೀಡಬೇಕು’ ಎಂದು ಬುಧವಾರ ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p class="title">‘ನ್ಯಾಯಾಲಯವು ಗಂಭೀರವಾದ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಲು ಬಯಸಿದಾಗ ಅಲ್ಲಿ ಮಾನವ ಸಂಪನ್ಮೂಲ ಮತ್ತು ಹಣದ ಕೊರತೆಯ ಸಮಸ್ಯೆ ಎದುರಾಗುತ್ತದೆ’ ಎಂದೂ ಮದುರೈ ನ್ಯಾಯಪೀಠವು ಕಿಡಿಕಾರಿದೆ.</p>.<p class="title">ರಾಮನಾಥಪುರಂ ಜಿಲ್ಲೆಯಲ್ಲಿ ನಡೆದ ₹ 300 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆ ವೇಳೆ, ನ್ಯಾಯಮೂರ್ತಿಗಳಾದ ಕೆ. ಕಿರುಬಾಕರನ್ ಮತ್ತು ಪಿ. ಪುಗಲೆಂದಿ ಅವರನ್ನೊಳಗೊಂಡ ನ್ಯಾಯಪೀಠವು, ‘ಸಿಬಿಐ ಸ್ವತಂತ್ರವಾಗಿರಬೇಕು ಮತ್ತು ಅದು ಯಾವುದೇ ಸರ್ಕಾರದ ನಿಯಂತ್ರಣಕ್ಕೊಳಪಡದೇ ಸ್ವಾಯತ್ತವಾಗಿ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದೆ.</p>.<p class="title">‘ಸಿಬಿಐಗೆ ಅಮೆರಿಕದ ಎಫ್ಬಿಐ ಹಾಗೂ ಬ್ರಿಟನ್ನ ಸ್ಕಾಟ್ಲೆಂಡ್ ಯಾರ್ಡ್ನಂತೆ ಮೂಲಸೌಕರ್ಯ ಕಲ್ಪಿಸಬೇಕು. ಸಿಬಿಐಗೆ ಅಗತ್ಯವಿರುವ ಸೌಕರ್ಯ, ಸಂಪನ್ಮೂಲ, ಅಗತ್ಯ ಸಿಬ್ಬಂದಿ ನೇಮಕ ಸೇರಿದಂತೆ ಇತರ ಸೌಕರ್ಯಗಳನ್ನು ಆರು ವಾರಗಳೊಳಗೆ ಕಲ್ಪಿಸಬೇಕು’ ಎಂದೂ ನ್ಯಾಯಾಲಯವು ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>