ಜುಲೈ 11ರಂದು ನಡೆದ ಪಕ್ಷದ ಜನರಲ್ ಕೌನ್ಸಿಲ್ ಸಭೆಯಲ್ಲಿ ಪಕ್ಷದ ಖಜಾಂಚಿ ಹುದ್ದೆ ಮತ್ತು ಪ್ರಾಥಮಿಕ ಸದಸ್ಯತ್ವದಿಂದ ಪನ್ನೀರಸೆಲ್ವಂ ಅವರನ್ನು ಉಚ್ಚಾಟಿಸಲಾಗಿತ್ತು. ಇದರಿಂದ ಕೋಪಗೊಂಡ ಪನ್ನೀರಸೆಲ್ವಂ ಬೆಂಬಲಿಗರು ಪಕ್ಷದ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ಪಳನಿಸ್ವಾಮಿ ಮತ್ತು ಪನ್ನೀರಸೆಲ್ವಂ ಬೆಂಬಲಿಗರ ಮಧ್ಯೆ ಘರ್ಷಣೆ ಏರ್ಪಟ್ಟಿತ್ತು. ಈ ಸಂದರ್ಭದಲ್ಲಿ ಕಂದಾಯ ಅಧಿಕಾರಿಗಳು ಕಚೇರಿಗೆ ಬೀಗ ಹಾಕಿದ್ದರು.