ಮುಂಬೈ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ನಲ್ಲಾದಲ್ಲಿ ಎಸ್ಯುವಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ಬಳಿಕ ಸೇತುವೆಯಿಂದ ಕೆಳಗುರುಳಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಪರತವಾಡ-ಬೈತುಲ್ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದ್ದು, ಗಾಯಾಳುವೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಹೇಳಿದ್ದಾರೆ.