ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಕಾಂಗ್ರೆಸ್‌ ಶಾಸಕ ರಾವ್‌ಸಾಹೇಬ್‌ ಅಂತಪುರ್ಕರ್‌ ನಿಧನ

Last Updated 10 ಏಪ್ರಿಲ್ 2021, 7:15 IST
ಅಕ್ಷರ ಗಾತ್ರ

ಮುಂಬೈ: ಕೋವಿಡ್‌ ನಂತರದ ಸಮಸ್ಯೆಗಳಿಂದ ಬಳಲುತ್ತಿದ್ದ ಮಹಾರಾಷ್ಟ್ರದ ಕಾಂಗ್ರೆಸ್‌ ಶಾಸಕ ರಾವ್‌ಸಾಹೇಬ್‌ ಅಂತಪುರ್ಕರ್‌ ಅವರು (64) ಶುಕ್ರವಾರ ನಿಧನರಾದರು.

ನಾಂದೇಡ್ ಜಿಲ್ಲೆಯ ದೇಗ್ಲೂರ್‌ ವಿಧಾನಸಭೆ ಕ್ಷೇತ್ರದಿಂದ ಎರಡನೇ ಬಾರಿ ಆಯ್ಕೆಯಾಗಿದ್ದರು.

‘ರಾವ್‌ಸಾಹೇಬ್‌ ಅಂತಪುರ್ಕರ್‌ ಅವರು ಕೋವಿಡ್ ನಂತರ ಕಾಣಿಸಿಕೊಂಡಿದ್ದ ಆರೋಗ್ಯ ಸಂಬಂಧಿ ತೊಂದರೆಗಳಿಗಾಗಿ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ರಾತ್ರಿ ಸಾವನ್ನಪ್ಪಿದರು’ ಎಂದು ಮೂಲಗಳು ಶನಿವಾರ ತಿಳಿಸಿವೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರಿಗೆ ಏಪ್ರಿಲ್ 1ರಿಂದ ವೆಂಟಿಲೇಟರ್‌ ನೆರವು ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT