ಮುಂಬೈ: ಕೋವಿಡ್ ನಂತರದ ಸಮಸ್ಯೆಗಳಿಂದ ಬಳಲುತ್ತಿದ್ದ ಮಹಾರಾಷ್ಟ್ರದ ಕಾಂಗ್ರೆಸ್ ಶಾಸಕ ರಾವ್ಸಾಹೇಬ್ ಅಂತಪುರ್ಕರ್ ಅವರು (64) ಶುಕ್ರವಾರ ನಿಧನರಾದರು.
ನಾಂದೇಡ್ ಜಿಲ್ಲೆಯ ದೇಗ್ಲೂರ್ ವಿಧಾನಸಭೆ ಕ್ಷೇತ್ರದಿಂದ ಎರಡನೇ ಬಾರಿ ಆಯ್ಕೆಯಾಗಿದ್ದರು.
‘ರಾವ್ಸಾಹೇಬ್ ಅಂತಪುರ್ಕರ್ ಅವರು ಕೋವಿಡ್ ನಂತರ ಕಾಣಿಸಿಕೊಂಡಿದ್ದ ಆರೋಗ್ಯ ಸಂಬಂಧಿ ತೊಂದರೆಗಳಿಗಾಗಿ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ರಾತ್ರಿ ಸಾವನ್ನಪ್ಪಿದರು’ ಎಂದು ಮೂಲಗಳು ಶನಿವಾರ ತಿಳಿಸಿವೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರಿಗೆ ಏಪ್ರಿಲ್ 1ರಿಂದ ವೆಂಟಿಲೇಟರ್ ನೆರವು ನೀಡಲಾಗಿತ್ತು.