<p><strong>ಮುಂಬೈ(ಪಿಟಿಐ):</strong> ಮಹಾರಾಷ್ಟ್ರ ರಾಜ್ಯಪಾಲ ಭಗತ್ಸಿಂಗ್ ಕೋಶ್ಯಾರಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದಾರೆ.</p>.<p>ವಿಧಾನಪರಿಷತ್ ಸದಸ್ಯರ ನಾಮನಿರ್ದೇಶನದ ಬಗ್ಗೆ ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳುವುದು ರಾಜ್ಯಪಾಲರ ಕರ್ತವ್ಯ ಎಂಬುದಾಗಿ ಬಾಂಬೆ ಹೈಕೋರ್ಟ್ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.</p>.<p>ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯಪಾಲರು ಭೇಟಿ ಮಾಡಿರುವುದಕ್ಕೆ ಪ್ರತಿಕ್ರಿಯಿಸಿರುವ ರಾಜಭವನ, ಇದೊಂದು ‘ಸೌಜನ್ಯದ ಭೇಟಿ’ ಎಂದು ಹೇಳಿದೆ.</p>.<p>12 ಜನರನ್ನು ವಿಧಾನ ಪರಿಷತ್ತಿಗೆ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡುವ ಸಂಬಂಧ ಮಹಾರಾಷ್ಟ್ರ ಸಚಿವ ಸಂಪುಟ ಪ್ರಸ್ತಾವನೆಯನ್ನು ರಾಜ್ಯಪಾಲರಿಗೆ ಕಳುಹಿಸಿತ್ತು. ಈ ಕುರಿತು ನಿರ್ಧಾರ ಕೈಗೊಳ್ಳದೇ ಇರುವುದು ರಾಜ್ಯಪಾಲ ಕೋಶ್ಯಾರಿ ಹಾಗೂ ಮಹಾ ವಿಕಾಸ್ ಆಘಾಡಿ (ಎಂವಿಎ) ಸರ್ಕಾರದ ನಡುವೆ ಸಂಘರ್ಷಕ್ಕೆ ಕಾರಣವಾಗಿತ್ತು.</p>.<p>ಈ ನಡುವೆ, ನಾಸಿಕ್ನ ನಿವಾಸಿಯೊಬ್ಬರು ವಿಧಾನ ಪರಿಷತ್ಗೆ ನಾಮನಿರ್ದೇಶನಕ್ಕೆ ಸಂಬಂಧಿಸಿ ತ್ವರಿತವಾಗಿ ನಿರ್ಧಾರ ಕೈಗೊಳ್ಳಲು ರಾಜ್ಯಪಾಲರಿಗೆ ನಿರ್ದೇಶನ ನೀಡುವಂತೆ ಕೋರಿ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.</p>.<p><a href="https://www.prajavani.net/india-news/floating-island-onboard-indias-first-indigenous-aircraft-carrier-ins-vikrant-857636.html" itemprop="url">ತೇಲುತ್ತಿರುವ ದ್ವೀಪ: ದೇಶದ ಮೊದಲ ಸ್ವದೇಶಿ ನಿರ್ಮಿತ ಐಎನ್ಎಸ್ ವಿಕ್ರಾಂತ್ </a></p>.<p>ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಜಿ.ಎಸ್. ಕುಲಕರ್ಣಿ ಅವರನ್ನೊಳಗೊಂಡ ವಿಭಾಗೀಯ ಪೀಠ ಅರ್ಜಿಯ ವಿಚಾರಣೆ ನಡೆಸಿತು.</p>.<p>‘12 ಜನರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುವಂತೆ ರಾಜ್ಯ ಸಚಿವ ಸಂಪುಟ ಸಲ್ಲಿಸಿರುವ ಪ್ರಸ್ತಾವನೆಗೆ ನಿಗದಿತ ಅವಧಿಗೊಳಗೆ ಅನುಮೋದಿಸುವ ಅಥವಾ ತಿರಸ್ಕರಿಸುವ ಸಾಂವಿಧಾನಿಕ ಹೊಣೆಗಾರಿಕೆ ರಾಜ್ಯಪಾಲರದ್ದು’ ಎಂದು ಪೀಠ ಹೇಳಿತ್ತು.</p>.<p>‘ಪ್ರಸ್ತಾವನೆ ಸಲ್ಲಿಸಿ 8 ತಿಂಗಳು ಕಳೆದಿವೆ. ತೀರ್ಮಾನ ಕೈಗೊಳ್ಳಲು ಇದು ನ್ಯಾಯಸಮ್ಮತ ಅವಧಿ. ಆದರೂ ರಾಜ್ಯಪಾಲರು ಈ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.</p>.<p><a href="https://www.prajavani.net/sports/cricket/pakistan-independence-day-kamral-akmal-trolled-for-wrong-spelling-of-independence-857633.html" itemprop="url">ಪಾಕ್ ಸ್ವಾತಂತ್ರ್ಯ ದಿನಾಚರಣೆಗೆ ವಿಷ್ ಮಾಡಿ ಟ್ರೋಲ್ಗೆ ಗುರಿಯಾದ ಕಮ್ರಾನ್ ಅಕ್ಮಲ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ(ಪಿಟಿಐ):</strong> ಮಹಾರಾಷ್ಟ್ರ ರಾಜ್ಯಪಾಲ ಭಗತ್ಸಿಂಗ್ ಕೋಶ್ಯಾರಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದಾರೆ.</p>.<p>ವಿಧಾನಪರಿಷತ್ ಸದಸ್ಯರ ನಾಮನಿರ್ದೇಶನದ ಬಗ್ಗೆ ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳುವುದು ರಾಜ್ಯಪಾಲರ ಕರ್ತವ್ಯ ಎಂಬುದಾಗಿ ಬಾಂಬೆ ಹೈಕೋರ್ಟ್ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.</p>.<p>ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯಪಾಲರು ಭೇಟಿ ಮಾಡಿರುವುದಕ್ಕೆ ಪ್ರತಿಕ್ರಿಯಿಸಿರುವ ರಾಜಭವನ, ಇದೊಂದು ‘ಸೌಜನ್ಯದ ಭೇಟಿ’ ಎಂದು ಹೇಳಿದೆ.</p>.<p>12 ಜನರನ್ನು ವಿಧಾನ ಪರಿಷತ್ತಿಗೆ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡುವ ಸಂಬಂಧ ಮಹಾರಾಷ್ಟ್ರ ಸಚಿವ ಸಂಪುಟ ಪ್ರಸ್ತಾವನೆಯನ್ನು ರಾಜ್ಯಪಾಲರಿಗೆ ಕಳುಹಿಸಿತ್ತು. ಈ ಕುರಿತು ನಿರ್ಧಾರ ಕೈಗೊಳ್ಳದೇ ಇರುವುದು ರಾಜ್ಯಪಾಲ ಕೋಶ್ಯಾರಿ ಹಾಗೂ ಮಹಾ ವಿಕಾಸ್ ಆಘಾಡಿ (ಎಂವಿಎ) ಸರ್ಕಾರದ ನಡುವೆ ಸಂಘರ್ಷಕ್ಕೆ ಕಾರಣವಾಗಿತ್ತು.</p>.<p>ಈ ನಡುವೆ, ನಾಸಿಕ್ನ ನಿವಾಸಿಯೊಬ್ಬರು ವಿಧಾನ ಪರಿಷತ್ಗೆ ನಾಮನಿರ್ದೇಶನಕ್ಕೆ ಸಂಬಂಧಿಸಿ ತ್ವರಿತವಾಗಿ ನಿರ್ಧಾರ ಕೈಗೊಳ್ಳಲು ರಾಜ್ಯಪಾಲರಿಗೆ ನಿರ್ದೇಶನ ನೀಡುವಂತೆ ಕೋರಿ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.</p>.<p><a href="https://www.prajavani.net/india-news/floating-island-onboard-indias-first-indigenous-aircraft-carrier-ins-vikrant-857636.html" itemprop="url">ತೇಲುತ್ತಿರುವ ದ್ವೀಪ: ದೇಶದ ಮೊದಲ ಸ್ವದೇಶಿ ನಿರ್ಮಿತ ಐಎನ್ಎಸ್ ವಿಕ್ರಾಂತ್ </a></p>.<p>ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಜಿ.ಎಸ್. ಕುಲಕರ್ಣಿ ಅವರನ್ನೊಳಗೊಂಡ ವಿಭಾಗೀಯ ಪೀಠ ಅರ್ಜಿಯ ವಿಚಾರಣೆ ನಡೆಸಿತು.</p>.<p>‘12 ಜನರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುವಂತೆ ರಾಜ್ಯ ಸಚಿವ ಸಂಪುಟ ಸಲ್ಲಿಸಿರುವ ಪ್ರಸ್ತಾವನೆಗೆ ನಿಗದಿತ ಅವಧಿಗೊಳಗೆ ಅನುಮೋದಿಸುವ ಅಥವಾ ತಿರಸ್ಕರಿಸುವ ಸಾಂವಿಧಾನಿಕ ಹೊಣೆಗಾರಿಕೆ ರಾಜ್ಯಪಾಲರದ್ದು’ ಎಂದು ಪೀಠ ಹೇಳಿತ್ತು.</p>.<p>‘ಪ್ರಸ್ತಾವನೆ ಸಲ್ಲಿಸಿ 8 ತಿಂಗಳು ಕಳೆದಿವೆ. ತೀರ್ಮಾನ ಕೈಗೊಳ್ಳಲು ಇದು ನ್ಯಾಯಸಮ್ಮತ ಅವಧಿ. ಆದರೂ ರಾಜ್ಯಪಾಲರು ಈ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.</p>.<p><a href="https://www.prajavani.net/sports/cricket/pakistan-independence-day-kamral-akmal-trolled-for-wrong-spelling-of-independence-857633.html" itemprop="url">ಪಾಕ್ ಸ್ವಾತಂತ್ರ್ಯ ದಿನಾಚರಣೆಗೆ ವಿಷ್ ಮಾಡಿ ಟ್ರೋಲ್ಗೆ ಗುರಿಯಾದ ಕಮ್ರಾನ್ ಅಕ್ಮಲ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>