ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಮ್ ಬಿರ್ ಸಿಂಗ್ ವಿರುದ್ಧ ಎಸಿಬಿ ತನಿಖೆ: ಮಹರಾಷ್ಟ್ರ ಸರ್ಕಾರ ಒಪ್ಪಿಗೆ

ಇನ್ಸ್‌ಪೆಕ್ಟರ್ ಅನೂಪ್ ಡಾಂಗೆ ಮಾಡಿದ್ದ ಭ್ರಷ್ಟಾಚಾರ ಆರೋಪದ ಪ್ರಕರಣ
Last Updated 15 ಜುಲೈ 2021, 13:50 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ಮುಕ್ತ ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಗುರುವಾರ ಅನುಮತಿ ನೀಡಿದೆ.

ಸಿಂಗ್ ವಿರುದ್ಧ ಪೊಲೀಸ್ ಇನ್ಸ್‌ಪೆಕ್ಟರ್ ಅನೂಪ್ ಡಾಂಗೆ ಅವರು ಮಾಡಿದ್ದ ಆರೋಪಗಳ ಬಗ್ಗೆ ಮುಕ್ತ ವಿಚಾರಣೆ ಆರಂಭಿಸಲು ಎಸಿಬಿ ಅನುಮತಿ ಕೋರಿತ್ತು. ಸರ್ಕಾರ ಬುಧವಾರ ಅನುಮೋದನೆ ನೀಡಿದೆ ಎಂದು ಎಸಿಬಿಯ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಅಮಾನತುಗೊಂಡಿದ್ದ ಅನೂಪ್‌ ಡಾಂಗೆ ಅವರು ‘ನನ್ನನ್ನು ಮತ್ತೆ ಪೊಲೀಸ್ ಕರ್ತವ್ಯಕ್ಕೆ ನಿಯೋಜಿಸಲು, ಪರಮ್‌ ಬಿರ್ ಸಿಂಗ್ ಅವರ ಸಂಬಂಧಿಕ ವ್ಯಕ್ತಿಯೊಬ್ಬ ₹2 ಕೋಟಿ ಲಂಚಕ್ಕೆ ಒತ್ತಾಯಿಸಿದ್ದ. ಸಿಂಗ್‌ ಅವರು ಭ್ರಷ್ಟಾಚಾರ ನಿಗ್ರಹ ದಳದ ಡಿಜಿಯಾಗಿದ್ದಾಗ ಭೂಗತಲೋಕದ ಸಂಪರ್ಕ ಹೊಂದಿರುವ ಕೆಲವು ಜನರನ್ನು ಕಾನೂನಿನಿಂದ ರಕ್ಷಿಸಲು ಪ್ರಯತ್ನಿಸಿದ್ದರು’ ಎಂದು ಆರೋಪಿಸಿದ್ದರು.

ಈ ಸಂಬಂಧ ಇದೇ ವರ್ಷದ ಫೆಬ್ರುವರಿ 2ರಂದು ಸಿಂಗ್ ವಿರುದ್ಧ ಮಹಾರಾಷ್ಟ್ರ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೂ ಡಾಂಗೆ ಪತ್ರವನ್ನು ಬರೆದಿದ್ದರು.

2020ರ ಜುಲೈನಲ್ಲಿ ಅಮಾನತುಗೊಳ್ಳುವ ಮೊದಲು ಪೊಲೀಸ್ ಇನ್‌ಸ್ಪೆಕ್ಟರ್‌ ಅನೂಪ್ ಡಾಂಗೆ,ಗಾಂದೇವಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT