ಔರಂಗಬಾದ್: ಒಬಿಸಿ ಪ್ರವರ್ಗದ ಎರಡು ಸಾವಿರ ವಿದ್ಯಾರ್ಥಿಗಳಿಗೆ, ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗದ (ಎಂಪಿಎಸ್ಸಿ) ಪರೀಕ್ಷೆಗಳಿಗೆ ಮತ್ತು ಒಂದು ಸಾವಿರ ವಿದ್ಯಾರ್ಥಿಗಳಿಗೆ ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಪರೀಕ್ಷೆಗಳಿಗೆ ತರಬೇತಿ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಸಚಿವ ವಿಜಯ್ ವಡೆಟ್ಟಿವಾರ್ ಶನಿವಾರ ತಿಳಿಸಿದ್ದಾರೆ.