ಮುಂಬೈ: ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿ.ವಿ. ಸಂಪಾದಕ ಅರ್ನಬ್ ಗೋಸ್ವಾಮಿ ಅವರ ಭದ್ರತೆ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಯಾರಿ ಅವರು ಗೃಹಸಚಿವ ಅನಿಲ್ ದೇಶ್ಮುಖ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.
ಅರ್ನಬ್ ಅವರನ್ನು ಭೇಟಿ ಮಾಡಿ ಮಾತನಾಡಲು ಅವರ ಕುಟುಂಬಕ್ಕೆ ಅವಕಾಶ ನೀಡಬೇಕೆಂದು ರಾಜ್ಯಪಾಲರು ಗೃಹಸಚಿವರಿಗೆ ಸೂಚಿಸಿದ್ದಾರೆ ಎಂದು ರಾಜ್ಯಪಾಲರ ಕಚೇರಿಯ ಪ್ರಕಟಣೆ ಸೋಮವಾರ ತಿಳಿಸಿದೆ.
ಅರ್ನಬ್ ಬಂಧನದ ರೀತಿಯ ಕುರಿತು ರಾಜ್ಯಪಾಲರು, ಗೃಹಸಚಿವರಲ್ಲಿ ತಮ್ಮ ಕಳವಳ ವ್ಯಕ್ತಪಡಿಸಿದ್ದರು.