<p><strong>ಪುಣೆ</strong>: ಮಹಾರಾಷ್ಟ್ರದಲ್ಲಿ ಪ್ರಕರಣಗಳು ಹೆಚ್ಚುತ್ತಿದ್ದಂತೆ ಪುಣೆ ಜಿಲ್ಲಾಡಳಿತವು ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ರಾತ್ರಿ 11 ರಿಂದ ಬೆಳಿಗ್ಗೆ ಆರು ಗಂಟೆಯ ವರೆಗೆ ರಾತ್ರಿ ಕರ್ಫ್ಯೂವನ್ನು ಘೋಷಿಸಿದೆ. ಈ ಸಮಯದಲ್ಲಿ ಅಗತ್ಯ ಸೇವೆಗಳಲ್ಲಿ ತೊಡಗಿರುವವರಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಿ ಕೊಡಲಾಗಿದೆ.</p>.<p>‘ಸೋಮವಾರದಿಂದ ರಾತ್ರಿ ಕರ್ಪ್ಯೂ ಜಾರಿಗೆ ಬರಲಿದ್ದು, ಈ ವೇಳೆ ಹಾಲು, ದಿನ ಪತ್ರಿಕೆ, ತರಕಾರಿ ವಿತರಣೆ ಮತ್ತು ಆಸ್ಪತ್ರೆ ಸೇವೆಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಪುಣೆಯಲ್ಲಿ ಫೆಬ್ರುವರಿ 28ರ ತನಕ ಶಾಲೆ ಮತ್ತು ಕಾಲೇಜು ಅನ್ನು ಮುಚ್ಚುವಂತೆ ಸೂಚಿಸಲಾಗಿದೆ. ಅಲ್ಲದೆ ಹೋಟೆಲ್ ಮತ್ತು ರೆಸ್ಟೋರೆಂಟ್ಗಳಿಗೆ ಪ್ರತಿನಿತ್ಯ ರಾತ್ರಿ 11 ಗಂಟೆಯ ಬಳಿಕ ಮುಚ್ಚುವಂತೆ ಸೂಚನೆ ನೀಡಲಾಗಿದೆ’ ಎಂದು ವಿಭಾಗೀಯ ಆಯುಕ್ತ ಸೌರಭ್ ರಾವ್ ಅವರು ಹೇಳಿದರು.</p>.<p>‘ಸೋಂಕು ಪ್ರಸರಣವನ್ನು ನಿಯಂತ್ರಿಸಲು ಸಣ್ಣ ಕಂಟೈನ್ಮೆಂಟ್ ವಲಯಗಳನ್ನು ವಿಂಗಡಿಸಲಾಗಿದೆ. ಸೋಂಕು ಪತ್ತೆ ಪ್ರಮಾಣ ಮತ್ತು ಪರೀಕ್ಷೆಯನ್ನು ಹೆಚ್ಚಿಸಲಾಗಿದೆ. ಮದುವೆ ಸೇರಿದಂತೆ ಇತರೆ ಸಾಮಾಜಿಕ ಕಾರ್ಯಕ್ರಮಗಳಿಗಾಗಿ ಹೊಸ ನಿಯಮಗಳನ್ನು ಬಿಡುಗಡೆಗೊಳಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.</p>.<p>ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರೊಂದಿಗೆ ಭಾನುವಾರ ಸಭೆ ನಡೆಸಿದ ಬಳಿಕ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.</p>.<p>ಶನಿವಾರ ಪುಣೆಯಲ್ಲಿ 998 ಹೊಸ ಪ್ರಕರಣಗಳು ವರದಿಯಾಗಿವೆ. ಹೊಸದಾಗಿ 9 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಪುಣೆಯಲ್ಲಿ ಈವರೆಗೆ 5,14,319 ಪ್ರಕರಣಗಳು ವರದಿಯಾಗಿವೆ. 11,698 ಮಂದಿ ಸಾವಿಗೀಡಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ</strong>: ಮಹಾರಾಷ್ಟ್ರದಲ್ಲಿ ಪ್ರಕರಣಗಳು ಹೆಚ್ಚುತ್ತಿದ್ದಂತೆ ಪುಣೆ ಜಿಲ್ಲಾಡಳಿತವು ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ರಾತ್ರಿ 11 ರಿಂದ ಬೆಳಿಗ್ಗೆ ಆರು ಗಂಟೆಯ ವರೆಗೆ ರಾತ್ರಿ ಕರ್ಫ್ಯೂವನ್ನು ಘೋಷಿಸಿದೆ. ಈ ಸಮಯದಲ್ಲಿ ಅಗತ್ಯ ಸೇವೆಗಳಲ್ಲಿ ತೊಡಗಿರುವವರಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಿ ಕೊಡಲಾಗಿದೆ.</p>.<p>‘ಸೋಮವಾರದಿಂದ ರಾತ್ರಿ ಕರ್ಪ್ಯೂ ಜಾರಿಗೆ ಬರಲಿದ್ದು, ಈ ವೇಳೆ ಹಾಲು, ದಿನ ಪತ್ರಿಕೆ, ತರಕಾರಿ ವಿತರಣೆ ಮತ್ತು ಆಸ್ಪತ್ರೆ ಸೇವೆಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಪುಣೆಯಲ್ಲಿ ಫೆಬ್ರುವರಿ 28ರ ತನಕ ಶಾಲೆ ಮತ್ತು ಕಾಲೇಜು ಅನ್ನು ಮುಚ್ಚುವಂತೆ ಸೂಚಿಸಲಾಗಿದೆ. ಅಲ್ಲದೆ ಹೋಟೆಲ್ ಮತ್ತು ರೆಸ್ಟೋರೆಂಟ್ಗಳಿಗೆ ಪ್ರತಿನಿತ್ಯ ರಾತ್ರಿ 11 ಗಂಟೆಯ ಬಳಿಕ ಮುಚ್ಚುವಂತೆ ಸೂಚನೆ ನೀಡಲಾಗಿದೆ’ ಎಂದು ವಿಭಾಗೀಯ ಆಯುಕ್ತ ಸೌರಭ್ ರಾವ್ ಅವರು ಹೇಳಿದರು.</p>.<p>‘ಸೋಂಕು ಪ್ರಸರಣವನ್ನು ನಿಯಂತ್ರಿಸಲು ಸಣ್ಣ ಕಂಟೈನ್ಮೆಂಟ್ ವಲಯಗಳನ್ನು ವಿಂಗಡಿಸಲಾಗಿದೆ. ಸೋಂಕು ಪತ್ತೆ ಪ್ರಮಾಣ ಮತ್ತು ಪರೀಕ್ಷೆಯನ್ನು ಹೆಚ್ಚಿಸಲಾಗಿದೆ. ಮದುವೆ ಸೇರಿದಂತೆ ಇತರೆ ಸಾಮಾಜಿಕ ಕಾರ್ಯಕ್ರಮಗಳಿಗಾಗಿ ಹೊಸ ನಿಯಮಗಳನ್ನು ಬಿಡುಗಡೆಗೊಳಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.</p>.<p>ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರೊಂದಿಗೆ ಭಾನುವಾರ ಸಭೆ ನಡೆಸಿದ ಬಳಿಕ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.</p>.<p>ಶನಿವಾರ ಪುಣೆಯಲ್ಲಿ 998 ಹೊಸ ಪ್ರಕರಣಗಳು ವರದಿಯಾಗಿವೆ. ಹೊಸದಾಗಿ 9 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಪುಣೆಯಲ್ಲಿ ಈವರೆಗೆ 5,14,319 ಪ್ರಕರಣಗಳು ವರದಿಯಾಗಿವೆ. 11,698 ಮಂದಿ ಸಾವಿಗೀಡಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>