<p><strong>ಔರಂಗಾಬಾದ್:</strong> ‘ಮಹಾರಾಷ್ಟ್ರ ಸರ್ಕಾರವು ಈ ವರ್ಷ ಔರಂಗಾಬಾದ್ ಜಿಲ್ಲೆಗೆ 75 ಈರುಳ್ಳಿ ಶೇಖರಣಾ ಸೌಲಭ್ಯಗಳನ್ನು ಮಂಜೂರು ಮಾಡಿದೆ. ಆದರೆ ಈ ಸೌಲಭ್ಯ ಪಡೆಯಲು 40,000 ಕ್ಕೂ ಅರ್ಜಿಗಳು ಸಲ್ಲಿಕೆಯಾಗಿವೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಮಹಾರಾಷ್ಟ್ರ ಸರ್ಕಾರವು ‘ಮಹಾ ಫಲೋಟ್ಪಾಡನ್ ವಿಕಾಸ್ ಅಭಿಯಾನ’ದಡಿ ರೈತರಿಗೆ ಶೇಖರಣಾ ಸೌಲಭ್ಯವನ್ನು ಒದಗಿಸುತ್ತದೆ. ಅರ್ಜಿ ಸಲ್ಲಿಸಿರುವ ಎಲ್ಲರಿಗೂ ಶೇಖರಣಾ ಸೌಲಭ್ಯವನ್ನು ನೀಡಬೇಕು ಎಂಬ ಬೇಡಿಕೆಯನ್ನು ಕೆಲವರು ಮುಂದಿಟ್ಟಿದ್ದಾರೆ’ ಎಂದು ಅವರು ಹೇಳಿದರು.</p>.<p>ಕಳೆದ ವರ್ಷ ಈರುಳ್ಳಿ ಶೇಖರಣಾ ಸೌಲಭ್ಯಗಳಿಗಾಗಿ 13,000 ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಇದರಲ್ಲಿ 1000 ಶೇಖರಣಾ ಸೌಲಭ್ಯಗಳನ್ನು ರೈತರಿಗೆ ಹಂಚಿಕೆ ಮಾಡಲಾಯಿತು.</p>.<p>ಈ ಋತುವಿನಲ್ಲಿ ಔರಂಗಾಬಾದ್ನ 20,000 ಹೆಕ್ಟರ್ ಭೂಮಿಯಲ್ಲಿ ಈರುಳ್ಳಿಯನ್ನು ಬೆಳೆಸಲಾಗುತ್ತಿದೆ. ಆದರೆ ಈ ವರ್ಷ ತಲಾ ₹87,500 ವೆಚ್ಚದ 75 ಶೇಖರಣಾ ಸೌಲಭ್ಯಗಳನ್ನು ಸರ್ಕಾರ ಮಂಜೂರು ಮಾಡಿದೆ. ಇದಕ್ಕಾಗಿ ನಮ್ಮ ಬಳಿ 40,623 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಅವರು ಮಾಹಿತಿ ನೀಡಿದರು.</p>.<p>‘ಈರುಳ್ಳಿ ಬೆಳೆಗಾರರ ಸಂಖ್ಯೆ ಹೆಚ್ಚುತ್ತಿದೆ. ಹೀಗಿರುವಾಗ ಸರ್ಕಾರ, ಬೇಡಿಕೆಗೆ ತಕ್ಕಂತೆ ಶೇಖರಣಾ ಸೌಲಭ್ಯವನ್ನು ಒದಗಿಸಬೇಕು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪಾಲ್ಕೇಡ್ ಗ್ರಾಮ ಪಂಚಾಯತಿ ಮನವಿ ಸಲ್ಲಿಸಿದೆ’ ಎಂದು ಪಾಲ್ಕೇಡ್ ಗ್ರಾಮ ಪಂಚಾಯತಿಯ ಮಾಜಿ ಸರ್ಪಂಚ್ ನಂದ್ಕಿಶೋರ್ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಂಗಾಬಾದ್:</strong> ‘ಮಹಾರಾಷ್ಟ್ರ ಸರ್ಕಾರವು ಈ ವರ್ಷ ಔರಂಗಾಬಾದ್ ಜಿಲ್ಲೆಗೆ 75 ಈರುಳ್ಳಿ ಶೇಖರಣಾ ಸೌಲಭ್ಯಗಳನ್ನು ಮಂಜೂರು ಮಾಡಿದೆ. ಆದರೆ ಈ ಸೌಲಭ್ಯ ಪಡೆಯಲು 40,000 ಕ್ಕೂ ಅರ್ಜಿಗಳು ಸಲ್ಲಿಕೆಯಾಗಿವೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಮಹಾರಾಷ್ಟ್ರ ಸರ್ಕಾರವು ‘ಮಹಾ ಫಲೋಟ್ಪಾಡನ್ ವಿಕಾಸ್ ಅಭಿಯಾನ’ದಡಿ ರೈತರಿಗೆ ಶೇಖರಣಾ ಸೌಲಭ್ಯವನ್ನು ಒದಗಿಸುತ್ತದೆ. ಅರ್ಜಿ ಸಲ್ಲಿಸಿರುವ ಎಲ್ಲರಿಗೂ ಶೇಖರಣಾ ಸೌಲಭ್ಯವನ್ನು ನೀಡಬೇಕು ಎಂಬ ಬೇಡಿಕೆಯನ್ನು ಕೆಲವರು ಮುಂದಿಟ್ಟಿದ್ದಾರೆ’ ಎಂದು ಅವರು ಹೇಳಿದರು.</p>.<p>ಕಳೆದ ವರ್ಷ ಈರುಳ್ಳಿ ಶೇಖರಣಾ ಸೌಲಭ್ಯಗಳಿಗಾಗಿ 13,000 ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಇದರಲ್ಲಿ 1000 ಶೇಖರಣಾ ಸೌಲಭ್ಯಗಳನ್ನು ರೈತರಿಗೆ ಹಂಚಿಕೆ ಮಾಡಲಾಯಿತು.</p>.<p>ಈ ಋತುವಿನಲ್ಲಿ ಔರಂಗಾಬಾದ್ನ 20,000 ಹೆಕ್ಟರ್ ಭೂಮಿಯಲ್ಲಿ ಈರುಳ್ಳಿಯನ್ನು ಬೆಳೆಸಲಾಗುತ್ತಿದೆ. ಆದರೆ ಈ ವರ್ಷ ತಲಾ ₹87,500 ವೆಚ್ಚದ 75 ಶೇಖರಣಾ ಸೌಲಭ್ಯಗಳನ್ನು ಸರ್ಕಾರ ಮಂಜೂರು ಮಾಡಿದೆ. ಇದಕ್ಕಾಗಿ ನಮ್ಮ ಬಳಿ 40,623 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಅವರು ಮಾಹಿತಿ ನೀಡಿದರು.</p>.<p>‘ಈರುಳ್ಳಿ ಬೆಳೆಗಾರರ ಸಂಖ್ಯೆ ಹೆಚ್ಚುತ್ತಿದೆ. ಹೀಗಿರುವಾಗ ಸರ್ಕಾರ, ಬೇಡಿಕೆಗೆ ತಕ್ಕಂತೆ ಶೇಖರಣಾ ಸೌಲಭ್ಯವನ್ನು ಒದಗಿಸಬೇಕು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪಾಲ್ಕೇಡ್ ಗ್ರಾಮ ಪಂಚಾಯತಿ ಮನವಿ ಸಲ್ಲಿಸಿದೆ’ ಎಂದು ಪಾಲ್ಕೇಡ್ ಗ್ರಾಮ ಪಂಚಾಯತಿಯ ಮಾಜಿ ಸರ್ಪಂಚ್ ನಂದ್ಕಿಶೋರ್ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>