<p><strong>ಔರಂಗಬಾದ್:</strong> ಮಹಾರಾಷ್ಟ್ರದ ಔರಂಗಬಾದ್ ಜಿಲ್ಲೆಯಲ್ಲಿ ಕೋವಿಡ್-19 ಸಂದರ್ಭ ಉದ್ಯೋಗ ಕಳೆದುಕೊಂಡ ಬಡ ಗೋಂಡ ಬುಡಕಟ್ಟು ಸಮುದಾಯದವರ ಮಕ್ಕಳಿಗೆ ನಿವೃತ್ತ ಶಿಕ್ಷಕರು ಪಾಠ ಹೇಳಿಕೊಟ್ಟಿದ್ದಾರೆ. ಓದಲು ಮತ್ತು ಬರೆಯಲು ಕಲಿಸಿಕೊಟ್ಟಿದ್ದಾರೆ.</p>.<p>'ಮಗುಳ್ನಗಿಸೋಣ' ಎಂಬ ಯೋಜನೆಯಡಿ ನಿವೃತ್ತ ಶಿಕ್ಷಕರ ಗುಂಪು 50ಕ್ಕೂ ಹೆಚ್ಚು ಬಡ ಮಕ್ಕಳಿಗೆ ವಿದ್ಯೆ ಕಲಿಸಿದ್ದಾರೆ. ಈ ಯೋಜನೆಯನ್ನು ವೃತ್ತಿನಿರತ ವೈದ್ಯರು ಮತ್ತು ಶಿಕ್ಷಕರು ಆರಂಭಿಸಿದ್ದಾರೆ.</p>.<p>ಬುಡಕಟ್ಟು ಸಮುದಾಯಕ್ಕೆ ಸೇರಿದ ಮಕ್ಕಳು ಈಗ ಓದಲು ಮತ್ತು ಬರೆಯಲು ಕಲಿತಿದ್ದಾರೆ. ಕ್ರೀಡಾ ಚಟುವಟಿಕೆಗಳಲ್ಲೂ ಭಾಗವಹಿಸುತ್ತಿದ್ದಾರೆ. ಸ್ವಚ್ಛವಾಗಿರುವುದನ್ನು ರೂಢಿಸಿಕೊಂಡಿದ್ದಾರೆ ಎಂದು ಯೋಜನೆಯ ಸದಸ್ಯರು ಸಂತಸ ವ್ಯಕ್ತಪಡಿಸಿದ್ದಾರೆ.</p>.<p>ಆದಿವಾಸಿ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಮುಖ್ಯ ವಾಹಿನಿಗೆ ಕರೆತರುವ ಪ್ರಯತ್ನವನ್ನು ಅಲ್ಲಿನ ಶಿಕ್ಷಣ ಇಲಾಖೆ ಶ್ಲಾಘಿಸಿದೆ. ಕೆಲವು ದಶಕಗಳಿಂದ ಔರಂಗಬಾದ್ನ ದೇವಗಿರಿ ಕೋಟೆಯ ಸಮೀಪ ಮಲಿವಾಡ ಪ್ರದೇಶದಲ್ಲಿ ಗೋಂಡ ಸಮುದಾಯ ನೆಲೆಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಂಗಬಾದ್:</strong> ಮಹಾರಾಷ್ಟ್ರದ ಔರಂಗಬಾದ್ ಜಿಲ್ಲೆಯಲ್ಲಿ ಕೋವಿಡ್-19 ಸಂದರ್ಭ ಉದ್ಯೋಗ ಕಳೆದುಕೊಂಡ ಬಡ ಗೋಂಡ ಬುಡಕಟ್ಟು ಸಮುದಾಯದವರ ಮಕ್ಕಳಿಗೆ ನಿವೃತ್ತ ಶಿಕ್ಷಕರು ಪಾಠ ಹೇಳಿಕೊಟ್ಟಿದ್ದಾರೆ. ಓದಲು ಮತ್ತು ಬರೆಯಲು ಕಲಿಸಿಕೊಟ್ಟಿದ್ದಾರೆ.</p>.<p>'ಮಗುಳ್ನಗಿಸೋಣ' ಎಂಬ ಯೋಜನೆಯಡಿ ನಿವೃತ್ತ ಶಿಕ್ಷಕರ ಗುಂಪು 50ಕ್ಕೂ ಹೆಚ್ಚು ಬಡ ಮಕ್ಕಳಿಗೆ ವಿದ್ಯೆ ಕಲಿಸಿದ್ದಾರೆ. ಈ ಯೋಜನೆಯನ್ನು ವೃತ್ತಿನಿರತ ವೈದ್ಯರು ಮತ್ತು ಶಿಕ್ಷಕರು ಆರಂಭಿಸಿದ್ದಾರೆ.</p>.<p>ಬುಡಕಟ್ಟು ಸಮುದಾಯಕ್ಕೆ ಸೇರಿದ ಮಕ್ಕಳು ಈಗ ಓದಲು ಮತ್ತು ಬರೆಯಲು ಕಲಿತಿದ್ದಾರೆ. ಕ್ರೀಡಾ ಚಟುವಟಿಕೆಗಳಲ್ಲೂ ಭಾಗವಹಿಸುತ್ತಿದ್ದಾರೆ. ಸ್ವಚ್ಛವಾಗಿರುವುದನ್ನು ರೂಢಿಸಿಕೊಂಡಿದ್ದಾರೆ ಎಂದು ಯೋಜನೆಯ ಸದಸ್ಯರು ಸಂತಸ ವ್ಯಕ್ತಪಡಿಸಿದ್ದಾರೆ.</p>.<p>ಆದಿವಾಸಿ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಮುಖ್ಯ ವಾಹಿನಿಗೆ ಕರೆತರುವ ಪ್ರಯತ್ನವನ್ನು ಅಲ್ಲಿನ ಶಿಕ್ಷಣ ಇಲಾಖೆ ಶ್ಲಾಘಿಸಿದೆ. ಕೆಲವು ದಶಕಗಳಿಂದ ಔರಂಗಬಾದ್ನ ದೇವಗಿರಿ ಕೋಟೆಯ ಸಮೀಪ ಮಲಿವಾಡ ಪ್ರದೇಶದಲ್ಲಿ ಗೋಂಡ ಸಮುದಾಯ ನೆಲೆಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>