<p><strong>ಪಾಲ್ಗರ್</strong>: ಮಹಾರಾಷ್ಟ್ರದ ಪಾಲ್ಗರ್ ಜಲ್ಲೆಯ ಮನೋರ್ ನಗರದಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದ್ದು, ನವೆಂಬರ್ನಿಂದ ಇಲ್ಲಿಯವರೆಗೂ 100ಕ್ಕೂ ಹೆಚ್ಚು ಜನರಿಗೆ ಕಚ್ಚಿವೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದರು.</p>.<p>ಈ ಪ್ರದೇಶದಲ್ಲಿ ಬೀದಿ ನಾಯಿಗಳ ಕಡಿತದ ಪ್ರಕರಣಗಳಲ್ಲಿ ದಿನೇ ದಿನೇ ಏರಿಕೆ ಆಗುತ್ತಿದೆ ಎಂದು ಮನೋರ್ ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್ಸಿ) ವೈದ್ಯಕೀಯ ಅಧಿಕಾರಿ ಡಾ.ಸ್ವಪ್ನಿಲ್ ಕುಂಬದ್ವಾಡ್ ಸುದ್ದಿಗಾರರಿಗೆ ಮಾಹಿತಿ ನೀಡಿದರು.</p>.<p>ಕಳೆದ ತಿಂಗಳು 58 ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ. ಡಿಸೆಂಬರ್ 1ರಿಂದ 10ವರೆಗೆ ನಾಯಿ ಕಡಿತದ 37 ಪ್ರಕರಣಗಳು ಬೆಳಕಿಗೆ ಬಂದಿವೆ.</p>.<p>‘ಸೋಮವಾರವೂ ಪಿಎಚ್ಸಿಯಲ್ಲಿ ಎರಡು ಹೊಸ ಪ್ರಕರಣಗಳು ವರದಿಯಾಗಿದ್ದು, 5 ರಿಂದ 7 ವರ್ಷದ ಮಕ್ಕಳು ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಅವರ ಪರಿಸ್ಥಿತಿ ಬಹಳ ಗಂಭೀರವಾಗಿದ್ದರಿಂದ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು’ ಎಂದು ಡಾ.ಸ್ವಪ್ನಿಲ್ ಅವರು ತಿಳಿಸಿದರು.</p>.<p>ಹೆಚ್ಚಾಗಿ ಮಕ್ಕಳು ನಾಯಿ ಕಡಿತಕ್ಕೆ ಒಳಗಾಗುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದರು. ಗಂಭೀರತೆಯನ್ನು ಅರಿತು, ಸ್ಥಳೀಯ ಆಡಳಿತ ತುರ್ತಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಇಲ್ಲಿನ ಜನರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಲ್ಗರ್</strong>: ಮಹಾರಾಷ್ಟ್ರದ ಪಾಲ್ಗರ್ ಜಲ್ಲೆಯ ಮನೋರ್ ನಗರದಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದ್ದು, ನವೆಂಬರ್ನಿಂದ ಇಲ್ಲಿಯವರೆಗೂ 100ಕ್ಕೂ ಹೆಚ್ಚು ಜನರಿಗೆ ಕಚ್ಚಿವೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದರು.</p>.<p>ಈ ಪ್ರದೇಶದಲ್ಲಿ ಬೀದಿ ನಾಯಿಗಳ ಕಡಿತದ ಪ್ರಕರಣಗಳಲ್ಲಿ ದಿನೇ ದಿನೇ ಏರಿಕೆ ಆಗುತ್ತಿದೆ ಎಂದು ಮನೋರ್ ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್ಸಿ) ವೈದ್ಯಕೀಯ ಅಧಿಕಾರಿ ಡಾ.ಸ್ವಪ್ನಿಲ್ ಕುಂಬದ್ವಾಡ್ ಸುದ್ದಿಗಾರರಿಗೆ ಮಾಹಿತಿ ನೀಡಿದರು.</p>.<p>ಕಳೆದ ತಿಂಗಳು 58 ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ. ಡಿಸೆಂಬರ್ 1ರಿಂದ 10ವರೆಗೆ ನಾಯಿ ಕಡಿತದ 37 ಪ್ರಕರಣಗಳು ಬೆಳಕಿಗೆ ಬಂದಿವೆ.</p>.<p>‘ಸೋಮವಾರವೂ ಪಿಎಚ್ಸಿಯಲ್ಲಿ ಎರಡು ಹೊಸ ಪ್ರಕರಣಗಳು ವರದಿಯಾಗಿದ್ದು, 5 ರಿಂದ 7 ವರ್ಷದ ಮಕ್ಕಳು ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಅವರ ಪರಿಸ್ಥಿತಿ ಬಹಳ ಗಂಭೀರವಾಗಿದ್ದರಿಂದ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು’ ಎಂದು ಡಾ.ಸ್ವಪ್ನಿಲ್ ಅವರು ತಿಳಿಸಿದರು.</p>.<p>ಹೆಚ್ಚಾಗಿ ಮಕ್ಕಳು ನಾಯಿ ಕಡಿತಕ್ಕೆ ಒಳಗಾಗುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದರು. ಗಂಭೀರತೆಯನ್ನು ಅರಿತು, ಸ್ಥಳೀಯ ಆಡಳಿತ ತುರ್ತಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಇಲ್ಲಿನ ಜನರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>