‘ಜುಲೈ 31ರಂದು ಪರ್ಭಾನಿ ಜಿಲ್ಲಾಧಿಕಾರಿ ದೀಪಕ್ ಮುಗ್ಲಿಕರ್ ನಿವೃತ್ತರಾಗಿದ್ದರು. ಆ ಸ್ಥಾನಕ್ಕೆ ಐಎಎಸ್ ಅಧಿಕಾರಿ ಅಚಲ್ ಗೋಯಲ್ ಅವರನ್ನು ನೇಮಿಸಲಾಗಿದೆ ಎನ್ನುವ ಕುರಿತು ಪತ್ರಿಕೆಗಳಲ್ಲಿ ವರದಿಯಾಗಿತ್ತು. ಅಚಲ್ ಅವರು ತಮ್ಮ ಪುಟ್ಟ ಮಗುವಿನೊಂದಿಗೆ ಮುಂಚಿತವಾಗಿಯೇ ಪರ್ಭಾನಿಗೆ ಬಂದಿದ್ದರು. ಆದರೆ, ಅವರು ಅಧಿಕಾರ ಸ್ವೀಕರಿಸುವ ಮುನ್ನವೇ ದಿಢೀರನೆ ಹೆಚ್ಚುವರಿ ಜಿಲ್ಲಾಧಿಕಾರಿ ರಾಜೇಶ್ ಕಾಟ್ಕರ್ ಅವರಿಗೆ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ. ಇದು ಕೆಲವು ರಾಜಕಾರಣಿಗಳ ಕುತಂತ್ರವಾಗಿದ್ದು, ನಾಚಿಕೆಗೇಡಿನ ಸಂಗತಿಯಾಗಿದೆ. ಮಹಿಳಾ ಸಬಲೀಕರಣದ ಕುರಿತು ರಾಜ್ಯ ಸರ್ಕಾರದ ಪೊಳ್ಳು ಕಾಳಜಿಯನ್ನು ಇದು ತೋರಿಸುತ್ತದೆ’ ಜಾಗೃತ್ ನಾಗರಿಕ್ ಅಘಾಡಿ ಅಧ್ಯಕ್ಷೆ ಮಾಧುರಿ ಕ್ಷೀರಸಾಗರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.