ನದಿ ನೀರು ಹಂಚಿಕೆ ಕುರಿತು ಕರ್ನಾಟಕ– ಗೋವಾ ನಡುವೆ ಹಲವು ವರ್ಷಗಳಿಂದ ವಿವಾದವಿದೆ. ಎರಡು ಜಲಾಶಯ ನಿರ್ಮಿಸುವ ಡಿಪಿಅರ್ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಚೆಗೆ ಪ್ರಕಟಿಸಿದ್ದರು. ಹೀಗಾಗಿ, ಈ ವಿಷಯ ಚರ್ಚಿಸಲು ಗೋವಾದ ಮುಖ್ಯಮಂತ್ರಿ ಸೋಮವಾರ ವಿಶೇಷ ಸಂಪುಟ ಸಭೆ ಕರೆದಿದ್ದರು.