‘ಮಹದಾಯಿ ನದಿ ನೀರು ಹಂಚಿಕೆ ವಿವಾದದ ವಿಚಾರಣೆ ಸದ್ಯ ನ್ಯಾಯಮಂಡಳಿ ಹಾಗೂ ಸುಪ್ರೀಂಕೋರ್ಟ್ನಲ್ಲಿ ನಡೆಯುತ್ತಿದೆ. ಆದರೆ, ಮಹಾರಾಷ್ಟ್ರ, ಗೋವಾ ಹಾಗೂ ಕರ್ನಾಟಕ ಸರ್ಕಾರಗಳು ಈ ವಿಷಯವಾಗಿ ರಾಜಕೀಯ ನಿರ್ಧಾರ ಕೈಗೊಳ್ಳಬೇಕು. ಮೂರು ಸರ್ಕಾರಗಳು ಒಟ್ಟಿಗೆ ಚರ್ಚಿಸಿ, ವಿವಾದವನ್ನು ಬಗೆಹರಿಸಿಕೊಳ್ಳಬೇಕು. ಇಂಥ ವೇದಿಕೆ ರೂಪಿಸುವಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಸಹ ವಿಫಲವಾಗಿದೆ’ ಎಂದು ಅಭಿಪ್ರಾಯಪಟ್ಟರು.