<p><strong>ಪಣಜಿ</strong>: ಮಹದಾಯಿ ತಿರುವು ಯೋಜನೆಯಡಿ ಕಳಸಾ ಮತ್ತು ಬಂಡೂರಿ ಉಪನದಿಗಳಿಗೆ ಅಣೆಕಟ್ಟು ನಿರ್ಮಿಸುವುದನ್ನು ಸ್ಥಗಿತಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ಪ್ರಧಾನ ವನ್ಯಜೀವಿ ಅಧಿಕಾರಿ ನೋಟಿಸ್ ನೀಡಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.</p>.<p>ಮಹದಾಯಿ ನದಿ ತಿರುವು ಯೋಜನೆ ವಿವಾದದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಚರ್ಚಿಸಲು ಸಾವಂತ್ ಅವರು ಉನ್ನತ ಅಧಿಕಾರಿಗಳು ಹಾಗೂ ಮಹದಾಯಿ ಬಚಾವೊ ಅಭಿಯಾನದ ಸದಸ್ಯರೊಂದಿಗೆ ಸೋಮವಾರ ಸಭೆ ನಡೆಸಿದ್ದರು. ನಂತರ, ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ.</p>.<p>‘ಮಹದಾಯಿ ನದಿ ನೀರು ಹಂಚಿಕೆ ವಿಷಯದಲ್ಲಿ ಗೋವಾದ ಹಿತಾಸಕ್ತಿ ಕಾಪಾಡುವುದಕ್ಕೆ ಸಂಬಂಧಿಸಿ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಸಭೆಗೆ ವಿವರಿಸಲಾಯಿತು. ಮಹದಾಯಿ ಬಚಾವೊ ಆಂದೋಲನ ಸದಸ್ಯರು ಸಹ ಉತ್ತಮ ಸಲಹೆಗಳನ್ನು ನೀಡಿದ್ದು, ಒಟ್ಟಾರೆ ಸಭೆಯು ಫಲಪ್ರದವಾಗಿತ್ತು’ ಎಂದು ಟ್ವೀಟ್ನಲ್ಲಿ ವಿವರಿಸಿದ್ದಾರೆ.</p>.<p>ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಡ್ವೊಕೇಟ್ ಜನರಲ್ ದೇವಿದಾಸ್ ಪಂಗಮ್, ‘ಕರ್ನಾಟಕದ ಡಿಪಿಆರ್ಗೆ ಒಪ್ಪಿಗೆ ನೀಡಿರುವುದನ್ನು ಪ್ರಶ್ನಿಸಿ ಗೋವಾ ಸರ್ಕಾರವು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಿದೆ’ ಎಂದರು.</p>.<p>ಆಂದೋಲನದ ಅಧ್ಯಕ್ಷೆ ನಿರ್ಮಲಾ ಸಾವಂತ್, ಪರಿಸರ ಹೋರಾಟಗಾರ ರಾಜೇಂದ್ರ ಕೇರ್ಕರ್ ಹಾಗೂ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ</strong>: ಮಹದಾಯಿ ತಿರುವು ಯೋಜನೆಯಡಿ ಕಳಸಾ ಮತ್ತು ಬಂಡೂರಿ ಉಪನದಿಗಳಿಗೆ ಅಣೆಕಟ್ಟು ನಿರ್ಮಿಸುವುದನ್ನು ಸ್ಥಗಿತಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ಪ್ರಧಾನ ವನ್ಯಜೀವಿ ಅಧಿಕಾರಿ ನೋಟಿಸ್ ನೀಡಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.</p>.<p>ಮಹದಾಯಿ ನದಿ ತಿರುವು ಯೋಜನೆ ವಿವಾದದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಚರ್ಚಿಸಲು ಸಾವಂತ್ ಅವರು ಉನ್ನತ ಅಧಿಕಾರಿಗಳು ಹಾಗೂ ಮಹದಾಯಿ ಬಚಾವೊ ಅಭಿಯಾನದ ಸದಸ್ಯರೊಂದಿಗೆ ಸೋಮವಾರ ಸಭೆ ನಡೆಸಿದ್ದರು. ನಂತರ, ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ.</p>.<p>‘ಮಹದಾಯಿ ನದಿ ನೀರು ಹಂಚಿಕೆ ವಿಷಯದಲ್ಲಿ ಗೋವಾದ ಹಿತಾಸಕ್ತಿ ಕಾಪಾಡುವುದಕ್ಕೆ ಸಂಬಂಧಿಸಿ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಸಭೆಗೆ ವಿವರಿಸಲಾಯಿತು. ಮಹದಾಯಿ ಬಚಾವೊ ಆಂದೋಲನ ಸದಸ್ಯರು ಸಹ ಉತ್ತಮ ಸಲಹೆಗಳನ್ನು ನೀಡಿದ್ದು, ಒಟ್ಟಾರೆ ಸಭೆಯು ಫಲಪ್ರದವಾಗಿತ್ತು’ ಎಂದು ಟ್ವೀಟ್ನಲ್ಲಿ ವಿವರಿಸಿದ್ದಾರೆ.</p>.<p>ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಡ್ವೊಕೇಟ್ ಜನರಲ್ ದೇವಿದಾಸ್ ಪಂಗಮ್, ‘ಕರ್ನಾಟಕದ ಡಿಪಿಆರ್ಗೆ ಒಪ್ಪಿಗೆ ನೀಡಿರುವುದನ್ನು ಪ್ರಶ್ನಿಸಿ ಗೋವಾ ಸರ್ಕಾರವು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಿದೆ’ ಎಂದರು.</p>.<p>ಆಂದೋಲನದ ಅಧ್ಯಕ್ಷೆ ನಿರ್ಮಲಾ ಸಾವಂತ್, ಪರಿಸರ ಹೋರಾಟಗಾರ ರಾಜೇಂದ್ರ ಕೇರ್ಕರ್ ಹಾಗೂ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>